BREAKING NEWS

ರಹಸ್ಯ ಸ್ಥಳದಲ್ಲಿ ಮುಂದುವರೆದ ಡಿ.ಕೆ.ಶಿ ಆಪರೇಷನ್ ಹಸ್ತ

ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಹಸ್ಯ ಸ್ಥಳದಲ್ಲಿ ಕುಳಿತು ಆಪರೇಷನ್ ಹಸ್ತ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದವರು ಅಸಮಧಾನಗೊಂಡು ಅನ್ಯ ಪಕ್ಷಗಳತ್ತ ಮುಖ ಮಾಡಿದ್ದಾರೆ. ಕೆಲವು ಮಾಜಿ ಶಾಸಕರು ಈಗಾಗಲೇ ಜೆಡಿಎಸ್ ಸೇರಿದ್ದಾರೆ. ಇನ್ನೂ ಕೆಲವು ಪ್ರಭಾವಿ ನಾಯಕರು ಬಿಜೆಪಿಯಲ್ಲಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡು ಪಕ್ಷೇತರರಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಬೆಂಗಳೂರು ಸೇರಿದಂತೆ ಕಾಂಗ್ರೆಸ್ ರಾಜ್ಯದ ಕೆಲವು ಮಹತ್ವದ ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಪ್ರಕಟಿಸಿಲ್ಲ. ಕಿತ್ತೂರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಕೇಂದ್ರ ಮತ್ತು ಪಶ್ಚಿಮ ಕ್ಷೇತ್ರ ಸೇರಿ ಹಲವು ಕಡೆ ಪ್ರಬಲ ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ ನಡೆಯುತ್ತಿದೆ. ಉತ್ತರ ಕರ್ನಾಟಕ ಭಾಗದ ಬಿಜೆಪಿ ಭದ್ರಕೋಟೆಯನ್ನು ಛೇದಿಸಲು ವ್ಯೂಹ ರಚಿಸಿರುವ ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕರಿಗೆ ಗಾಳ ಹಾಕಿದೆ.

ಇತರ ಪಕ್ಷಗಳಿಂದ ಪ್ರಭಾವಿಗಳೇ ಬಿಜೆಪಿ ಸೇರುತ್ತಾರೆ ಕಾದು ನೋಡಿ ಎಂದು ಡಿ.ಕೆ.ಶಿವಕುಮಾರ್ ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ತಮ್ಮ ಅಂಗರಕ್ಷಕರನ್ನು ಬಿಟ್ಟು ರಹಸ್ಯ ಸ್ಥಳಕ್ಕೆ ತೆರಳಿದ್ದರು.
ಬಾಕಿ ಇರುವ 58 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಬಿಜೆಪಿ ಮತ್ತು ಜೆಡಿಎಸ್‍ನ ಪ್ರಭಾವಿ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಕೆಲವು ನಾಯಕರು ಕಾಂಗ್ರೆಸ್‍ಗೆ ಬರಲು ಹಿಂದೇಟು ಹಾಕಿದರೆ ಅಂತಹ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವವರಿಗೆ ಬೆಂಬಲ ಘೋಷಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.

ಮುಂದಿನ ದಿನಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ಪಕ್ಷೇತರಾಗಿ ಆಯ್ಕೆಯಾದವರ ಬೆಂಬಲ ಕಾಂಗ್ರೆಸ್‍ಗೆ ಪ್ರಯೋಜನಕಾರಿಯಾಗಬಹುದು ಎಂಬ ಲೆಕ್ಕಾಚಾರಗಳೂ ಪಕ್ಷದಲ್ಲಿ ನಡೆಯುತ್ತಿವೆ. ಬಿಜೆಪಿಯಲ್ಲಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ನಿನ್ನೆ ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲಾಗಿದೆ. ಮುಂದುವರೆದು ಪ್ರಭಾವಿ ನಾಯಕರನ್ನು ಸೆಳೆಯಲು ಡಿ.ಕೆ.ಶಿವಕುಮಾರ್ ತಂತ್ರಗಾರಿಕೆ ನಡೆಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಐದು ದಿನಗಳು ಬಾಕಿ ಇವೆ. ಅಷ್ಟರಲ್ಲಿ ಎಷ್ಟು ಮಂದಿ ಸಾಧ್ಯವೋ ಅಷ್ಟು ಜನರನ್ನು ಕಾಂಗ್ರೆಸ್‍ಗೆ ಸೆಳೆಯಲು ಯತ್ನಗಳು ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮತ್ತು ಅನ್ಯ ಪಕ್ಷಗಳ ಅಸಮಧಾನಿತರ ಜೊತೆ ಸಂಪರ್ಕ ನಡೆಸುತ್ತಿದ್ದಾರೆ. ಇಂದು ಸಂಜೆ ಅಥವಾ ನಾಳೆಯಲ್ಲಿ ಮತ್ತಷ್ಟು ಪ್ರಭಾವಿಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ದೇವನಹಳ್ಳಿಯ ಮಾಜಿ ಶಾಸಕ ವೆಂಕಟಸ್ವಾಮಿ ನಿಧನದ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಅಂತಿಮ ದರ್ಶನ ಪಡೆದಿದ್ದು, ಮತ್ತೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

2 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

15 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

16 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

23 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

23 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

1 day ago