ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಹಸ್ಯ ಸ್ಥಳದಲ್ಲಿ ಕುಳಿತು ಆಪರೇಷನ್ ಹಸ್ತ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದವರು ಅಸಮಧಾನಗೊಂಡು ಅನ್ಯ ಪಕ್ಷಗಳತ್ತ ಮುಖ ಮಾಡಿದ್ದಾರೆ. ಕೆಲವು ಮಾಜಿ ಶಾಸಕರು ಈಗಾಗಲೇ ಜೆಡಿಎಸ್ ಸೇರಿದ್ದಾರೆ. ಇನ್ನೂ ಕೆಲವು ಪ್ರಭಾವಿ ನಾಯಕರು ಬಿಜೆಪಿಯಲ್ಲಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡು ಪಕ್ಷೇತರರಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.
ಬೆಂಗಳೂರು ಸೇರಿದಂತೆ ಕಾಂಗ್ರೆಸ್ ರಾಜ್ಯದ ಕೆಲವು ಮಹತ್ವದ ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಪ್ರಕಟಿಸಿಲ್ಲ. ಕಿತ್ತೂರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಕೇಂದ್ರ ಮತ್ತು ಪಶ್ಚಿಮ ಕ್ಷೇತ್ರ ಸೇರಿ ಹಲವು ಕಡೆ ಪ್ರಬಲ ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ ನಡೆಯುತ್ತಿದೆ. ಉತ್ತರ ಕರ್ನಾಟಕ ಭಾಗದ ಬಿಜೆಪಿ ಭದ್ರಕೋಟೆಯನ್ನು ಛೇದಿಸಲು ವ್ಯೂಹ ರಚಿಸಿರುವ ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕರಿಗೆ ಗಾಳ ಹಾಕಿದೆ.
ಇತರ ಪಕ್ಷಗಳಿಂದ ಪ್ರಭಾವಿಗಳೇ ಬಿಜೆಪಿ ಸೇರುತ್ತಾರೆ ಕಾದು ನೋಡಿ ಎಂದು ಡಿ.ಕೆ.ಶಿವಕುಮಾರ್ ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ತಮ್ಮ ಅಂಗರಕ್ಷಕರನ್ನು ಬಿಟ್ಟು ರಹಸ್ಯ ಸ್ಥಳಕ್ಕೆ ತೆರಳಿದ್ದರು.
ಬಾಕಿ ಇರುವ 58 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಬಿಜೆಪಿ ಮತ್ತು ಜೆಡಿಎಸ್ನ ಪ್ರಭಾವಿ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಕೆಲವು ನಾಯಕರು ಕಾಂಗ್ರೆಸ್ಗೆ ಬರಲು ಹಿಂದೇಟು ಹಾಕಿದರೆ ಅಂತಹ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವವರಿಗೆ ಬೆಂಬಲ ಘೋಷಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಮುಂದಿನ ದಿನಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ಪಕ್ಷೇತರಾಗಿ ಆಯ್ಕೆಯಾದವರ ಬೆಂಬಲ ಕಾಂಗ್ರೆಸ್ಗೆ ಪ್ರಯೋಜನಕಾರಿಯಾಗಬಹುದು ಎಂಬ ಲೆಕ್ಕಾಚಾರಗಳೂ ಪಕ್ಷದಲ್ಲಿ ನಡೆಯುತ್ತಿವೆ. ಬಿಜೆಪಿಯಲ್ಲಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ನಿನ್ನೆ ಕಾಂಗ್ರೆಸ್ಗೆ ಸೇರಿಸಿಕೊಳ್ಳಲಾಗಿದೆ. ಮುಂದುವರೆದು ಪ್ರಭಾವಿ ನಾಯಕರನ್ನು ಸೆಳೆಯಲು ಡಿ.ಕೆ.ಶಿವಕುಮಾರ್ ತಂತ್ರಗಾರಿಕೆ ನಡೆಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಐದು ದಿನಗಳು ಬಾಕಿ ಇವೆ. ಅಷ್ಟರಲ್ಲಿ ಎಷ್ಟು ಮಂದಿ ಸಾಧ್ಯವೋ ಅಷ್ಟು ಜನರನ್ನು ಕಾಂಗ್ರೆಸ್ಗೆ ಸೆಳೆಯಲು ಯತ್ನಗಳು ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮತ್ತು ಅನ್ಯ ಪಕ್ಷಗಳ ಅಸಮಧಾನಿತರ ಜೊತೆ ಸಂಪರ್ಕ ನಡೆಸುತ್ತಿದ್ದಾರೆ. ಇಂದು ಸಂಜೆ ಅಥವಾ ನಾಳೆಯಲ್ಲಿ ಮತ್ತಷ್ಟು ಪ್ರಭಾವಿಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ದೇವನಹಳ್ಳಿಯ ಮಾಜಿ ಶಾಸಕ ವೆಂಕಟಸ್ವಾಮಿ ನಿಧನದ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಅಂತಿಮ ದರ್ಶನ ಪಡೆದಿದ್ದು, ಮತ್ತೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…