BREAKING NEWS

ರಹಸ್ಯ ಸ್ಥಳದಲ್ಲಿ ಮುಂದುವರೆದ ಡಿ.ಕೆ.ಶಿ ಆಪರೇಷನ್ ಹಸ್ತ

ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಹಸ್ಯ ಸ್ಥಳದಲ್ಲಿ ಕುಳಿತು ಆಪರೇಷನ್ ಹಸ್ತ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದವರು ಅಸಮಧಾನಗೊಂಡು ಅನ್ಯ ಪಕ್ಷಗಳತ್ತ ಮುಖ ಮಾಡಿದ್ದಾರೆ. ಕೆಲವು ಮಾಜಿ ಶಾಸಕರು ಈಗಾಗಲೇ ಜೆಡಿಎಸ್ ಸೇರಿದ್ದಾರೆ. ಇನ್ನೂ ಕೆಲವು ಪ್ರಭಾವಿ ನಾಯಕರು ಬಿಜೆಪಿಯಲ್ಲಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡು ಪಕ್ಷೇತರರಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಬೆಂಗಳೂರು ಸೇರಿದಂತೆ ಕಾಂಗ್ರೆಸ್ ರಾಜ್ಯದ ಕೆಲವು ಮಹತ್ವದ ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಪ್ರಕಟಿಸಿಲ್ಲ. ಕಿತ್ತೂರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಕೇಂದ್ರ ಮತ್ತು ಪಶ್ಚಿಮ ಕ್ಷೇತ್ರ ಸೇರಿ ಹಲವು ಕಡೆ ಪ್ರಬಲ ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ ನಡೆಯುತ್ತಿದೆ. ಉತ್ತರ ಕರ್ನಾಟಕ ಭಾಗದ ಬಿಜೆಪಿ ಭದ್ರಕೋಟೆಯನ್ನು ಛೇದಿಸಲು ವ್ಯೂಹ ರಚಿಸಿರುವ ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕರಿಗೆ ಗಾಳ ಹಾಕಿದೆ.

ಇತರ ಪಕ್ಷಗಳಿಂದ ಪ್ರಭಾವಿಗಳೇ ಬಿಜೆಪಿ ಸೇರುತ್ತಾರೆ ಕಾದು ನೋಡಿ ಎಂದು ಡಿ.ಕೆ.ಶಿವಕುಮಾರ್ ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ತಮ್ಮ ಅಂಗರಕ್ಷಕರನ್ನು ಬಿಟ್ಟು ರಹಸ್ಯ ಸ್ಥಳಕ್ಕೆ ತೆರಳಿದ್ದರು.
ಬಾಕಿ ಇರುವ 58 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಬಿಜೆಪಿ ಮತ್ತು ಜೆಡಿಎಸ್‍ನ ಪ್ರಭಾವಿ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಕೆಲವು ನಾಯಕರು ಕಾಂಗ್ರೆಸ್‍ಗೆ ಬರಲು ಹಿಂದೇಟು ಹಾಕಿದರೆ ಅಂತಹ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವವರಿಗೆ ಬೆಂಬಲ ಘೋಷಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.

ಮುಂದಿನ ದಿನಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ಪಕ್ಷೇತರಾಗಿ ಆಯ್ಕೆಯಾದವರ ಬೆಂಬಲ ಕಾಂಗ್ರೆಸ್‍ಗೆ ಪ್ರಯೋಜನಕಾರಿಯಾಗಬಹುದು ಎಂಬ ಲೆಕ್ಕಾಚಾರಗಳೂ ಪಕ್ಷದಲ್ಲಿ ನಡೆಯುತ್ತಿವೆ. ಬಿಜೆಪಿಯಲ್ಲಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ನಿನ್ನೆ ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲಾಗಿದೆ. ಮುಂದುವರೆದು ಪ್ರಭಾವಿ ನಾಯಕರನ್ನು ಸೆಳೆಯಲು ಡಿ.ಕೆ.ಶಿವಕುಮಾರ್ ತಂತ್ರಗಾರಿಕೆ ನಡೆಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಐದು ದಿನಗಳು ಬಾಕಿ ಇವೆ. ಅಷ್ಟರಲ್ಲಿ ಎಷ್ಟು ಮಂದಿ ಸಾಧ್ಯವೋ ಅಷ್ಟು ಜನರನ್ನು ಕಾಂಗ್ರೆಸ್‍ಗೆ ಸೆಳೆಯಲು ಯತ್ನಗಳು ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮತ್ತು ಅನ್ಯ ಪಕ್ಷಗಳ ಅಸಮಧಾನಿತರ ಜೊತೆ ಸಂಪರ್ಕ ನಡೆಸುತ್ತಿದ್ದಾರೆ. ಇಂದು ಸಂಜೆ ಅಥವಾ ನಾಳೆಯಲ್ಲಿ ಮತ್ತಷ್ಟು ಪ್ರಭಾವಿಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ದೇವನಹಳ್ಳಿಯ ಮಾಜಿ ಶಾಸಕ ವೆಂಕಟಸ್ವಾಮಿ ನಿಧನದ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಅಂತಿಮ ದರ್ಶನ ಪಡೆದಿದ್ದು, ಮತ್ತೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

lokesh

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

5 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

5 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

6 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

7 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

11 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

11 hours ago