BREAKING NEWS

ಪ್ರತಿನಿತ್ಯ 20 ಸಾವಿರ ಕೋವಿಡ್ ಪರೀಕ್ಷೆ ಗುರಿ

ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ.

ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ ಐಎಲ್‌ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ತಿಳಿಸಲಾಗಿದೆ.

ನಿಗದಿಪಡಿಸಲಾದ ಕೋವಿಡ್ ಪರೀಕ್ಷೆ ಗುರಿಯಲ್ಲಿ ಶೇ 70ರಷ್ಟು ಪರೀಕ್ಷೆಗಳನ್ನು ಆರ್‌ಟಿ–ಪಿಸಿಆರ್ ವಿಧಾನದ ಮೂಲಕ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಬೇಕು. ಶೇ 30ರಷ್ಟು ಪರೀಕ್ಷೆಗಳನ್ನು ರ್‍ಯಾಟ್ ಮಾದರಿಯಲ್ಲಿ ಮಾಡಬೇಕು ಎಂದು ಹೇಳಲಾಗಿದೆ.

ರಾಜ್ಯದ ಪ್ರಯೋಗಾಲಯದಲ್ಲಿ ಕಳೆದ 10 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 7,729 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಸರಾಸರಿಶೇ 3.53 ರಷ್ಟಿದೆ. ಬೆಂಗಳೂರಿನಲ್ಲಿ ಸರಾಸರಿ 1,979 ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ 7.51ಕ್ಕೆ ತಲುಪಿದೆ. ಬಳ್ಳಾರಿಯಲ್ಲಿ ಶೇ 7.95, ಶಿವಮೊಗ್ಗದಲ್ಲಿ ಶೇ 6.2, ದಾವಣಗೆರೆಯಲ್ಲಿ ಶೇ 6.09, ಮೈಸೂರಿನಲ್ಲಿ ಶೇ 5.07, ಚಿಕ್ಕಮಗಳೂರಿನಲ್ಲಿ ಶೇ 4.34ರಷ್ಟು ದೃಢಪ್ರಮಾಣ ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಶೇ 4ಕ್ಕಿಂತ ಕಡಿಮೆಯಿದೆ.

ಬೆಂಗಳೂರಿನಲ್ಲಿ ಪರೀಕ್ಷೆ ಗುರಿಯನ್ನು 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ ಉಳಿದ ಜಿಲ್ಲೆಗಳಿಗೂ ಪರೀಕ್ಷೆಯ ಗುರಿಯನ್ನು ಎರಡು ಮೂರು ಪಟ್ಟು ಹೆಚ್ಚಿಸಲಾಗಿದೆ. ಶಿವಮೊಗ್ಗ, ಕೊಡಗು ಹಾಗೂ ಹಾವೇರಿಯಲ್ಲಿ ಈಗಾಗಲೇ ನಿಗದಿತ ಗುರಿಗಿಂತ ಹೆಚ್ಚಿನ ಪರೀಕ್ಷೆ ಗಳನ್ನು ನಡೆಸಲಾಗುತ್ತಿದೆ.

ಅಧಿಕ ಗುರಿ ಪಡೆದ 5 ಜಿಲ್ಲೆಗಳು

ಜಿಲ್ಲೆ; ನಡೆಸುತ್ತಿರುವ ಪರೀಕ್ಷೆ ; ಗುರಿ

ಬೆಂಗಳೂರು; 1,979; 10,000

ಬೆಳಗಾವಿ; 407; 700

ಮೈಸೂರು; 162; 700

ದಕ್ಷಿಣ ಕನ್ನಡ; 359; 500

ಕಲಬುರಗಿ; 245; 480

lokesh

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

2 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

2 hours ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

2 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

2 hours ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

2 hours ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

11 hours ago