ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ.
ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ ಐಎಲ್ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ತಿಳಿಸಲಾಗಿದೆ.
ನಿಗದಿಪಡಿಸಲಾದ ಕೋವಿಡ್ ಪರೀಕ್ಷೆ ಗುರಿಯಲ್ಲಿ ಶೇ 70ರಷ್ಟು ಪರೀಕ್ಷೆಗಳನ್ನು ಆರ್ಟಿ–ಪಿಸಿಆರ್ ವಿಧಾನದ ಮೂಲಕ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಬೇಕು. ಶೇ 30ರಷ್ಟು ಪರೀಕ್ಷೆಗಳನ್ನು ರ್ಯಾಟ್ ಮಾದರಿಯಲ್ಲಿ ಮಾಡಬೇಕು ಎಂದು ಹೇಳಲಾಗಿದೆ.
ರಾಜ್ಯದ ಪ್ರಯೋಗಾಲಯದಲ್ಲಿ ಕಳೆದ 10 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 7,729 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಸರಾಸರಿಶೇ 3.53 ರಷ್ಟಿದೆ. ಬೆಂಗಳೂರಿನಲ್ಲಿ ಸರಾಸರಿ 1,979 ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ 7.51ಕ್ಕೆ ತಲುಪಿದೆ. ಬಳ್ಳಾರಿಯಲ್ಲಿ ಶೇ 7.95, ಶಿವಮೊಗ್ಗದಲ್ಲಿ ಶೇ 6.2, ದಾವಣಗೆರೆಯಲ್ಲಿ ಶೇ 6.09, ಮೈಸೂರಿನಲ್ಲಿ ಶೇ 5.07, ಚಿಕ್ಕಮಗಳೂರಿನಲ್ಲಿ ಶೇ 4.34ರಷ್ಟು ದೃಢಪ್ರಮಾಣ ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಶೇ 4ಕ್ಕಿಂತ ಕಡಿಮೆಯಿದೆ.
ಬೆಂಗಳೂರಿನಲ್ಲಿ ಪರೀಕ್ಷೆ ಗುರಿಯನ್ನು 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ ಉಳಿದ ಜಿಲ್ಲೆಗಳಿಗೂ ಪರೀಕ್ಷೆಯ ಗುರಿಯನ್ನು ಎರಡು ಮೂರು ಪಟ್ಟು ಹೆಚ್ಚಿಸಲಾಗಿದೆ. ಶಿವಮೊಗ್ಗ, ಕೊಡಗು ಹಾಗೂ ಹಾವೇರಿಯಲ್ಲಿ ಈಗಾಗಲೇ ನಿಗದಿತ ಗುರಿಗಿಂತ ಹೆಚ್ಚಿನ ಪರೀಕ್ಷೆ ಗಳನ್ನು ನಡೆಸಲಾಗುತ್ತಿದೆ.
ಅಧಿಕ ಗುರಿ ಪಡೆದ 5 ಜಿಲ್ಲೆಗಳು
ಜಿಲ್ಲೆ; ನಡೆಸುತ್ತಿರುವ ಪರೀಕ್ಷೆ ; ಗುರಿ
ಬೆಂಗಳೂರು; 1,979; 10,000
ಬೆಳಗಾವಿ; 407; 700
ಮೈಸೂರು; 162; 700
ದಕ್ಷಿಣ ಕನ್ನಡ; 359; 500
ಕಲಬುರಗಿ; 245; 480
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…