BREAKING NEWS

ಪ್ರತಿನಿತ್ಯ 20 ಸಾವಿರ ಕೋವಿಡ್ ಪರೀಕ್ಷೆ ಗುರಿ

ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ.

ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ ಐಎಲ್‌ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ತಿಳಿಸಲಾಗಿದೆ.

ನಿಗದಿಪಡಿಸಲಾದ ಕೋವಿಡ್ ಪರೀಕ್ಷೆ ಗುರಿಯಲ್ಲಿ ಶೇ 70ರಷ್ಟು ಪರೀಕ್ಷೆಗಳನ್ನು ಆರ್‌ಟಿ–ಪಿಸಿಆರ್ ವಿಧಾನದ ಮೂಲಕ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಬೇಕು. ಶೇ 30ರಷ್ಟು ಪರೀಕ್ಷೆಗಳನ್ನು ರ್‍ಯಾಟ್ ಮಾದರಿಯಲ್ಲಿ ಮಾಡಬೇಕು ಎಂದು ಹೇಳಲಾಗಿದೆ.

ರಾಜ್ಯದ ಪ್ರಯೋಗಾಲಯದಲ್ಲಿ ಕಳೆದ 10 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 7,729 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಸರಾಸರಿಶೇ 3.53 ರಷ್ಟಿದೆ. ಬೆಂಗಳೂರಿನಲ್ಲಿ ಸರಾಸರಿ 1,979 ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ 7.51ಕ್ಕೆ ತಲುಪಿದೆ. ಬಳ್ಳಾರಿಯಲ್ಲಿ ಶೇ 7.95, ಶಿವಮೊಗ್ಗದಲ್ಲಿ ಶೇ 6.2, ದಾವಣಗೆರೆಯಲ್ಲಿ ಶೇ 6.09, ಮೈಸೂರಿನಲ್ಲಿ ಶೇ 5.07, ಚಿಕ್ಕಮಗಳೂರಿನಲ್ಲಿ ಶೇ 4.34ರಷ್ಟು ದೃಢಪ್ರಮಾಣ ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಶೇ 4ಕ್ಕಿಂತ ಕಡಿಮೆಯಿದೆ.

ಬೆಂಗಳೂರಿನಲ್ಲಿ ಪರೀಕ್ಷೆ ಗುರಿಯನ್ನು 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ ಉಳಿದ ಜಿಲ್ಲೆಗಳಿಗೂ ಪರೀಕ್ಷೆಯ ಗುರಿಯನ್ನು ಎರಡು ಮೂರು ಪಟ್ಟು ಹೆಚ್ಚಿಸಲಾಗಿದೆ. ಶಿವಮೊಗ್ಗ, ಕೊಡಗು ಹಾಗೂ ಹಾವೇರಿಯಲ್ಲಿ ಈಗಾಗಲೇ ನಿಗದಿತ ಗುರಿಗಿಂತ ಹೆಚ್ಚಿನ ಪರೀಕ್ಷೆ ಗಳನ್ನು ನಡೆಸಲಾಗುತ್ತಿದೆ.

ಅಧಿಕ ಗುರಿ ಪಡೆದ 5 ಜಿಲ್ಲೆಗಳು

ಜಿಲ್ಲೆ; ನಡೆಸುತ್ತಿರುವ ಪರೀಕ್ಷೆ ; ಗುರಿ

ಬೆಂಗಳೂರು; 1,979; 10,000

ಬೆಳಗಾವಿ; 407; 700

ಮೈಸೂರು; 162; 700

ದಕ್ಷಿಣ ಕನ್ನಡ; 359; 500

ಕಲಬುರಗಿ; 245; 480

lokesh

Recent Posts

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

29 mins ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

39 mins ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

1 hour ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

1 hour ago

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…

2 hours ago

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…

2 hours ago