ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ.
ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ ಐಎಲ್ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ತಿಳಿಸಲಾಗಿದೆ.
ನಿಗದಿಪಡಿಸಲಾದ ಕೋವಿಡ್ ಪರೀಕ್ಷೆ ಗುರಿಯಲ್ಲಿ ಶೇ 70ರಷ್ಟು ಪರೀಕ್ಷೆಗಳನ್ನು ಆರ್ಟಿ–ಪಿಸಿಆರ್ ವಿಧಾನದ ಮೂಲಕ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಬೇಕು. ಶೇ 30ರಷ್ಟು ಪರೀಕ್ಷೆಗಳನ್ನು ರ್ಯಾಟ್ ಮಾದರಿಯಲ್ಲಿ ಮಾಡಬೇಕು ಎಂದು ಹೇಳಲಾಗಿದೆ.
ರಾಜ್ಯದ ಪ್ರಯೋಗಾಲಯದಲ್ಲಿ ಕಳೆದ 10 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 7,729 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಸರಾಸರಿಶೇ 3.53 ರಷ್ಟಿದೆ. ಬೆಂಗಳೂರಿನಲ್ಲಿ ಸರಾಸರಿ 1,979 ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ 7.51ಕ್ಕೆ ತಲುಪಿದೆ. ಬಳ್ಳಾರಿಯಲ್ಲಿ ಶೇ 7.95, ಶಿವಮೊಗ್ಗದಲ್ಲಿ ಶೇ 6.2, ದಾವಣಗೆರೆಯಲ್ಲಿ ಶೇ 6.09, ಮೈಸೂರಿನಲ್ಲಿ ಶೇ 5.07, ಚಿಕ್ಕಮಗಳೂರಿನಲ್ಲಿ ಶೇ 4.34ರಷ್ಟು ದೃಢಪ್ರಮಾಣ ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಶೇ 4ಕ್ಕಿಂತ ಕಡಿಮೆಯಿದೆ.
ಬೆಂಗಳೂರಿನಲ್ಲಿ ಪರೀಕ್ಷೆ ಗುರಿಯನ್ನು 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ ಉಳಿದ ಜಿಲ್ಲೆಗಳಿಗೂ ಪರೀಕ್ಷೆಯ ಗುರಿಯನ್ನು ಎರಡು ಮೂರು ಪಟ್ಟು ಹೆಚ್ಚಿಸಲಾಗಿದೆ. ಶಿವಮೊಗ್ಗ, ಕೊಡಗು ಹಾಗೂ ಹಾವೇರಿಯಲ್ಲಿ ಈಗಾಗಲೇ ನಿಗದಿತ ಗುರಿಗಿಂತ ಹೆಚ್ಚಿನ ಪರೀಕ್ಷೆ ಗಳನ್ನು ನಡೆಸಲಾಗುತ್ತಿದೆ.
ಅಧಿಕ ಗುರಿ ಪಡೆದ 5 ಜಿಲ್ಲೆಗಳು
ಜಿಲ್ಲೆ; ನಡೆಸುತ್ತಿರುವ ಪರೀಕ್ಷೆ ; ಗುರಿ
ಬೆಂಗಳೂರು; 1,979; 10,000
ಬೆಳಗಾವಿ; 407; 700
ಮೈಸೂರು; 162; 700
ದಕ್ಷಿಣ ಕನ್ನಡ; 359; 500
ಕಲಬುರಗಿ; 245; 480
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…