ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ.
ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ ಐಎಲ್ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ತಿಳಿಸಲಾಗಿದೆ.
ನಿಗದಿಪಡಿಸಲಾದ ಕೋವಿಡ್ ಪರೀಕ್ಷೆ ಗುರಿಯಲ್ಲಿ ಶೇ 70ರಷ್ಟು ಪರೀಕ್ಷೆಗಳನ್ನು ಆರ್ಟಿ–ಪಿಸಿಆರ್ ವಿಧಾನದ ಮೂಲಕ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಬೇಕು. ಶೇ 30ರಷ್ಟು ಪರೀಕ್ಷೆಗಳನ್ನು ರ್ಯಾಟ್ ಮಾದರಿಯಲ್ಲಿ ಮಾಡಬೇಕು ಎಂದು ಹೇಳಲಾಗಿದೆ.
ರಾಜ್ಯದ ಪ್ರಯೋಗಾಲಯದಲ್ಲಿ ಕಳೆದ 10 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 7,729 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಸರಾಸರಿಶೇ 3.53 ರಷ್ಟಿದೆ. ಬೆಂಗಳೂರಿನಲ್ಲಿ ಸರಾಸರಿ 1,979 ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ 7.51ಕ್ಕೆ ತಲುಪಿದೆ. ಬಳ್ಳಾರಿಯಲ್ಲಿ ಶೇ 7.95, ಶಿವಮೊಗ್ಗದಲ್ಲಿ ಶೇ 6.2, ದಾವಣಗೆರೆಯಲ್ಲಿ ಶೇ 6.09, ಮೈಸೂರಿನಲ್ಲಿ ಶೇ 5.07, ಚಿಕ್ಕಮಗಳೂರಿನಲ್ಲಿ ಶೇ 4.34ರಷ್ಟು ದೃಢಪ್ರಮಾಣ ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಶೇ 4ಕ್ಕಿಂತ ಕಡಿಮೆಯಿದೆ.
ಬೆಂಗಳೂರಿನಲ್ಲಿ ಪರೀಕ್ಷೆ ಗುರಿಯನ್ನು 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ ಉಳಿದ ಜಿಲ್ಲೆಗಳಿಗೂ ಪರೀಕ್ಷೆಯ ಗುರಿಯನ್ನು ಎರಡು ಮೂರು ಪಟ್ಟು ಹೆಚ್ಚಿಸಲಾಗಿದೆ. ಶಿವಮೊಗ್ಗ, ಕೊಡಗು ಹಾಗೂ ಹಾವೇರಿಯಲ್ಲಿ ಈಗಾಗಲೇ ನಿಗದಿತ ಗುರಿಗಿಂತ ಹೆಚ್ಚಿನ ಪರೀಕ್ಷೆ ಗಳನ್ನು ನಡೆಸಲಾಗುತ್ತಿದೆ.
ಅಧಿಕ ಗುರಿ ಪಡೆದ 5 ಜಿಲ್ಲೆಗಳು
ಜಿಲ್ಲೆ; ನಡೆಸುತ್ತಿರುವ ಪರೀಕ್ಷೆ ; ಗುರಿ
ಬೆಂಗಳೂರು; 1,979; 10,000
ಬೆಳಗಾವಿ; 407; 700
ಮೈಸೂರು; 162; 700
ದಕ್ಷಿಣ ಕನ್ನಡ; 359; 500
ಕಲಬುರಗಿ; 245; 480
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…