ಜೈಪುರ: ಮನೆಯಲ್ಲಿ ಒಂಟಿಯಾಗಿದ್ದ ವೇಳೆ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಆಕೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಗುರುವಾರ (ಏ.6) ಘಟನೆ ನಡೆದಿದ್ದು, ಪರಿಹಾರದ ಭರವಸೆ ಸಿಕ್ಕ ಬಳಿಕವಷ್ಟೇ ಭಾನುವಾರ ಮಹಿಳೆಯ ಅಂತ್ಯಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದರು.
ಮಹಿಳೆಯು ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಶಕೂರ್ ಖಾನ್ ಎಂಬಾತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಾಡ್ಮೇರ್ ಗ್ರಾಮದಲ್ಲಿ ಘಟನೆ ನಡೆಸಿದ್ದು, ಶಕೂರ್ ಕೂಡ ಇದೇ ಗ್ರಾಮದವರಾಗಿದ್ದಾರೆ. ಅತ್ಯಾಚಾರ ಎಸಗಿದ ಮೇಲೆ ಆ್ಯಸಿಡ್ ಅನ್ನು ಹೋಲುವ ವಸ್ತುವೊಂದನ್ನು ಆಕೆಯ ಮೈ ಮೇಲೆ ಎರಚಿ, ನಂತರ ಬೆಂಕಿ ಹಚ್ಚಲಾಗಿದೆ.
ಎರಡು ಮಕ್ಕಳ ತಾಯಿಯಾದ 30 ವರ್ಷದ ಮಹಿಳೆಗೆ ಶೇ 50ರಷ್ಟು ಸುಟ್ಟ ಗಾಯಗಳಾಗಿದ್ದವು. ಅವರನ್ನು ಜೋಧಪುರದ ಸರ್ಕಾರಿ ಆಸ್ಪತ್ರೆಗೆ ಶುಕ್ರವಾರ ದಾಖಲು ಮಾಡಲಾಗಿತ್ತು. ಶನಿವಾರ ಮಹಿಳೆ ಮೃತಪಟ್ಟಿದ್ದಾರೆ.
‘ಇಬ್ಬರು ಪೊಲೀಸ್ ಅಧಿಕಾರಿಗಳು ನಮ್ಮಗಳ ಜೊತೆ ತಪ್ಪಾಗಿ ನಡೆದುಕೊಂಡಿದ್ದಾರೆ’ ಎಂದು ದೂರಿದ ಮಹಿಳೆಯ ಕುಟುಂಬಸ್ಥರು ಮೃತದೇಹವನ್ನು ಪಡೆಯಲು ನಿರಾಕರಿಸಿದರು. ‘ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವಜಾ ಮಾಡಬೇಕು. ₹1 ಕೋಟಿ ಪರಿಹಾರದ ಜೊತೆಗೆ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಕೆಲಸ ನೀಡಬೇಕು’ ಎಂದು ಒತ್ತಾಯಿಸಿದರು.
‘ಸರ್ಕಾರಿ ಯೋಜನೆಗಳ ಅನ್ವಯ ಗರಿಷ್ಠ ಮಟ್ಟದ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ ಬಳಿಕ ಕುಟುಂಬದವರು ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೀಡಿದರು. ಶನಿವಾರ ರಾತ್ರಿ ವೇಳೆಗೆ ಮರಣೋತ್ತರ ಪರೀಕ್ಷೆ ನಡೆದಿದ್ದು, ಭಾನುವಾರ ಮಹಿಳೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು’ ಎಂದು ಬಾಡ್ಮೇರ್ನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟರ್ ಅವನೀಶ್ ಪನ್ವಾರ್ ತಿಳಿಸಿದರು.
ನಿಯೋಗ ಭೇಟಿ: ಪಾಲಿ ಕ್ಷೇತ್ರದ ಸಂಸದ ಪಿ.ಪಿ. ಚೌಧರಿ, ವಿರೋಧ ಪಕ್ಷದ ಉಪ ನಾಯಕ ಸತೀಶ್ ಪೋನಿಯಾ ಹಾಗೂ ಜಾಲೋರ್ ಕ್ಷೇತ್ರದ ಶಾಸಕ ಜೋಗೇಶ್ವರ್ ಗಾರ್ಗ್ ಅವರ ನಿಯೋಗವು ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿತು.
‘ಒಬ್ಬ ಮಹಿಳೆಯಾಗಿ, ನೀವು ಮನೆಯಲ್ಲಿ ಒಂಟಿಯಾಗಿದ್ದೀರ ಎಂದಾದರೆ, ನೀವು ಸುರಕ್ಷಿತವಾಗಿಲ್ಲ. ರಾಜ್ಯ ಸರ್ಕಾರದಿಂದ ರಕ್ಷಣೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಈ ಸರ್ಕಾರವು ತನ್ನ ಮಾಲೀಕರನ್ನು ಓಲೈಸುವುದರಲ್ಲಿ ನಿರತವಾಗಿದೆ. ಜನರಿಗಾಗಿ ಈ ಸರ್ಕಾರ ಕೆಲಸ ಮಾಡುತ್ತಿಲ್ಲ’ ಎಂದು ಬಿಜೆಪಿ ಆರೋಪಿಸಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…