ತಮಿಳುನಾಡು: ತಮಿಳು ನಟ ದಳಪತಿ ವಿಜಯ್ ಹಲವು ದಿನಗಳ ಕಾಯುವಿಕೆಯ ನಂತರ ತಾವು ರಾಜಕೀಯಕ್ಕೆ ಬರುವುದನ್ನು ಖಚಿತಪಡಿಸಿದ್ದಾರೆ. ನೂತನವಾಗಿ “ತಮಿಳುನಾಡು ವೆಟ್ರಿ ಕಳಗಂ” ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ.
ದಳಪತಿ ವಿಜಯ್ ತಮ್ಮ ಪಕ್ಷದ ಹೆಸರು ಘೋಷಣೆ ಮಾಡಿದ್ದು, ಇದು ತಮಿಳುನಾಡಿನ ಸಿನಿಮಾ ಹಾಗೂ ರಾಜಕೀಯದಲ್ಲಿ ಹೊಸ ತಿರುವು ಪಡೆದಿದೆ.
ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ನಟ ವಿಜಯ್ ಅವರು ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಸುಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
2024ರ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು, ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.
ಇದೀಗ ನಟ ವಿಜಯ್ ತಮ್ಮ ಟಿವಿಕೆ ಪಕ್ಷ ಘೋಷಣೆ ಮಾಡಿದ್ದು, ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…