BREAKING NEWS

“ತಮಿಳುನಾಡು ವೆಟ್ರಿ ಕಳಗಂ” ನೂತನ ಪಕ್ಷ ಘೋಷಿಸಿದ ದಳಪತಿ ವಿಜಯ್!

ತಮಿಳುನಾಡು: ತಮಿಳು ನಟ ದಳಪತಿ ವಿಜಯ್ ಹಲವು ದಿನಗಳ ಕಾಯುವಿಕೆಯ ನಂತರ ತಾವು ರಾಜಕೀಯಕ್ಕೆ ಬರುವುದನ್ನು ಖಚಿತಪಡಿಸಿದ್ದಾರೆ. ನೂತನವಾಗಿ “ತಮಿಳುನಾಡು ವೆಟ್ರಿ ಕಳಗಂ” ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ.

ದಳಪತಿ ವಿಜಯ್ ತಮ್ಮ ಪಕ್ಷದ ಹೆಸರು ಘೋಷಣೆ ಮಾಡಿದ್ದು, ಇದು ತಮಿಳುನಾಡಿನ ಸಿನಿಮಾ ಹಾಗೂ ರಾಜಕೀಯದಲ್ಲಿ ಹೊಸ ತಿರುವು ಪಡೆದಿದೆ.

ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ನಟ ವಿಜಯ್ ಅವರು ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಸುಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

2024ರ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು, ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇದೀಗ ನಟ ವಿಜಯ್‌ ತಮ್ಮ ಟಿವಿಕೆ ಪಕ್ಷ ಘೋಷಣೆ ಮಾಡಿದ್ದು, ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

1 hour ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

3 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

4 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

5 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

7 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

8 hours ago