BREAKING NEWS

ಪೊಲೀಸ್‌ ಠಾಣೆಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ

ಬೆಂಗಳೂರು : ನಟ ದರ್ಶನ್‌ ಇರುವ ಠಣೆಗೆ ಅವರ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್‌ ಕಳೆದ ಒಂದು ವಾರದಿಂದ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಈ ವೇಳೆ ದರ್ಶನ್‌ ಸ್ನೇಹಿತರಾಗಿ ಅಥವ ಕುಟುಂಬಸ್ಥರಾಗಲಿ ಯಾರೊಬ್ಬರಿಗೂ ಅವರನ್ನು ಭೇಟಿ ಮಾಡುವ ಅವಕಾಶವನ್ನು ನೀಡಿರಲಿಲ್ಲ.

ಆದರ ಇದೀಗ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್‌ ಇರುವ ಅನ್ನಪೋರ್ಣೇಶ್ವರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ದರ್ಶನ ಪರ ವಾದ ಮಂಡಿಸಲು ವಿಜಯಲಕ್ಷ್ಮಿ ಅವರೆ ವಕೀಲರನ್ನು ನೇಮಿಸಿದ್ದರು. ಬಳಿಕ ಕೊಲೆಯಾದ ಮಲ್ಲಿಕಾರ್ಜುನಸ್ವಾಮಿಯ ಬಟ್ಟೆ ವಿಜಯಲಕ್ಷ್ಮಿ ಅವರ ನಿವಾಸದಲ್ಲಿ ಸಿಕ್ಕಿದ್ದು, ಅದನ್ನು ಪೊಲೀಸರು ಸೀಸ್‌ ಮಾಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಇದೀಗ ವಿಜಯಲಕ್ಷ್ಮಿ ಅವರು ದರ್ಶನ್‌ ಇರುವ ಪೊಲೀಸ್‌ ಠಾಣೆಗೆ ಭೇಟಿ ನೀಡಿರುವುದು ಅನೇಕ ಕುತೂಹಲಗಳಿಗೆ ಕಾರಣವಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

10 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

10 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

10 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

10 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

10 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

10 hours ago