BREAKING NEWS

ಪೊಲೀಸ್‌ ಠಾಣೆಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ

ಬೆಂಗಳೂರು : ನಟ ದರ್ಶನ್‌ ಇರುವ ಠಣೆಗೆ ಅವರ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್‌ ಕಳೆದ ಒಂದು ವಾರದಿಂದ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಈ ವೇಳೆ ದರ್ಶನ್‌ ಸ್ನೇಹಿತರಾಗಿ ಅಥವ ಕುಟುಂಬಸ್ಥರಾಗಲಿ ಯಾರೊಬ್ಬರಿಗೂ ಅವರನ್ನು ಭೇಟಿ ಮಾಡುವ ಅವಕಾಶವನ್ನು ನೀಡಿರಲಿಲ್ಲ.

ಆದರ ಇದೀಗ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್‌ ಇರುವ ಅನ್ನಪೋರ್ಣೇಶ್ವರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ದರ್ಶನ ಪರ ವಾದ ಮಂಡಿಸಲು ವಿಜಯಲಕ್ಷ್ಮಿ ಅವರೆ ವಕೀಲರನ್ನು ನೇಮಿಸಿದ್ದರು. ಬಳಿಕ ಕೊಲೆಯಾದ ಮಲ್ಲಿಕಾರ್ಜುನಸ್ವಾಮಿಯ ಬಟ್ಟೆ ವಿಜಯಲಕ್ಷ್ಮಿ ಅವರ ನಿವಾಸದಲ್ಲಿ ಸಿಕ್ಕಿದ್ದು, ಅದನ್ನು ಪೊಲೀಸರು ಸೀಸ್‌ ಮಾಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಇದೀಗ ವಿಜಯಲಕ್ಷ್ಮಿ ಅವರು ದರ್ಶನ್‌ ಇರುವ ಪೊಲೀಸ್‌ ಠಾಣೆಗೆ ಭೇಟಿ ನೀಡಿರುವುದು ಅನೇಕ ಕುತೂಹಲಗಳಿಗೆ ಕಾರಣವಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

6 mins ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

17 mins ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

1 hour ago

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

1 hour ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

3 hours ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

3 hours ago