BREAKING NEWS

ದಸರಾ ಆನೆ ಬಲರಾಮನಿಗೆ ಗುಂಡೇಟು

ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ದುರ್ಘಟನೆ, ಆರೋಪಿ ರೈತನ ಬಂಧನ

ಮೈಸೂರು: ಸತತ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ ಬಲರಾಮ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ. ಕಾಡಾನೆ ಎಂದು ಭಾವಿಸಿ ರೈತರೊಬ್ಬರು ಹಾರಿಸಿದ ಗುಂಡು ದಸರಾ ಆನೆಯ ಹೊಟ್ಟೆ ಭಾಗಕ್ಕೆ ತಗುಲಿದೆ. ಅದೃಷ್ಟವಶಾತ್‌ ಬಲರಾಮ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹುಣಸೂರು ವನ್ಯಜೀವಿ ವಲಯದ ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ಗುರುವಾರ ರಾತ್ರಿ ಈ ಘಟನೆ ಸಂಭವಿಸಿದೆ. ಆರೋಪಿ ಸುರೇಶ್‌ ನನ್ನು ಬಂಧಿಸಲಾಗಿದ್ದು, ಕೋರ್ಟ್‌ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಗುರುವಾರ ಮೇಯಲು ಬಿಟ್ಟ ಆನೆ ಶಿಬಿರಕ್ಕೆ ಮರಳಿರಲಿಲ್ಲ. ಹುಡುಕಿಕೊಂಡು ಹೋದಾಗ ಬಲರಾಮ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ತಕ್ಷಣ ಆನೆಯನ್ನು ಭೀಮನಕಟ್ಟೆ ಶಿಬಿರಕ್ಕೆ ಕರೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಕಾಡತೂಸು ಬಳಸಿ ಗುಂಡು ಹಾರಿಸಲಾಗಿದ್ದು ಬಲರಾಮನ ಹೊಟ್ಟೆಯ ಭಾಗಕ್ಕೆ ಗುಂಡೇಟು ತಗುಲಿದೆ. ಗುಂಡಿನ ಭಾಗಗಳನ್ನು ದೇಹದಿಂದ ತೆಗೆಯಲಾಗಿದ್ದು ಆತಂಕಪಡುವ ಅಗತ್ಯವಿಲ್ಲ ಹುಣಸೂರು ವನ್ಯಜೀವಿ ವಿಭಾಗದ ಡಿಸಿಎಫ್‌ ಹರ್ಷಕುಮಾರ್‌ ಚಿಕ್ಕನರಗುಂದ ಆಂದೋಲನಕ್ಕೆ ತಿಳಿಸಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮತ್ತಿಗೋಡು ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಹೆಸರಿನ ಆನೆ ಕಳೆದ ತಿಂಗಳು (ನವೆಂಬರ್‌ 23) ಕಾಡಾನೆ ದಾಳಿಯಿಂದ ಮೃತಪಟ್ಟ ಬೆನ್ನಿಗೇ ಈ ದುರ್ಘಟನೆ ಸಂಭವಿಸಿದೆ.

ಅತ್ಯಂತ ಶಾಂತ ಸ್ವಭಾವದ 64 ವರ್ಷ ವಯಸ್ಸಿನ ಬಲರಾಮ ಈ ಬಾರಿಯೂ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿತ್ತು. 1996ರಿಂದ ದಸರಾದಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತಿರುವ ಬಲರಾಮ 1999ರಿಂದ 2011ರ ತನಕ ನಿರಂತರವಾಗಿ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ.

ದ್ರೋಣನ ಸಾವಿನ ಬಳಿಕ ಮೊದಲ ಬಾರಿ ಅರ್ಜುನ ಅಂಬಾರಿ ಹೊತ್ತು ನಡೆದಿದ್ದ. ಆದರೆ ಮಾವುತನನ್ನು ಸಾಯಿಸಿದ ಹಿನ್ನೆಲೆಯಲ್ಲಿ ಅರ್ಜುನನ ಬದಲು ಬಲರಾಮನಿಗೆ ಈ ಜವಾಬ್ದಾರಿ ಹೊರಿಸಲಾಗಿತ್ತು. ಬಲಗಣ್ಣಿನ ದೋಷವಿದ್ದರೂ ಬಲರಾಮ 13 ವರ್ಷಗಳ ಕಾಲ ಯಶಸ್ವಿಯಾಗಿ ತನ್ನ ಜವಾಬ್ದಾರಿಯನ್ನು ನಿಭಾಯಿಸಿದ್ದ. ವಯಸ್ಸಿನ ಕಾರಣಕ್ಕೆ ಅಂಬಾರಿ ಹೊಣೆಯಿಂದ ವಿಮುಕ್ತನಾದರೂ ಬಲರಾಮ ಈಗಲೂ ದಸರಾ ಗಜಪಡೆಯ ಕಾಯಂ ಸದಸ್ಯನಾಗಿ ಮುಂದುವರಿದಿದ್ದಾನೆ.

andolanait

Recent Posts

ಓದುಗರ ಪತ್ರ: ಸಾರ್ವಜನಿಕ ಶೌಚಾಲಯಗಳ ಬೀಗ ತೆರವು

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…

56 mins ago

ಓದುಗರ ಪತ್ರ: ಬಾಂಬ್ ಬೆದರಿಕೆ: ಕಠಿಣ ಶಿಕ್ಷೆ ನೀಡಿ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…

59 mins ago

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…

1 hour ago

ಕಕ್ಕೆಹೊಳೆ, ಗಾಂಧಿ ವೃತ್ತದಲ್ಲಿ ಕ್ಯಾಮೆರಾ ಕಾರ್ಯಾರಂಭ

ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…

1 hour ago

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…

1 hour ago

‘ಶಾಲೆಗೆ ಹೋಗಲು ವಾಹನ ವ್ಯವಸ್ಥೆ ಮಾಡಿಕೊಡಿ’

ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…

1 hour ago