BREAKING NEWS

ದಸರಾ ಆನೆ ಬಲರಾಮನಿಗೆ ಗುಂಡೇಟು

ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ದುರ್ಘಟನೆ, ಆರೋಪಿ ರೈತನ ಬಂಧನ

ಮೈಸೂರು: ಸತತ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ ಬಲರಾಮ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ. ಕಾಡಾನೆ ಎಂದು ಭಾವಿಸಿ ರೈತರೊಬ್ಬರು ಹಾರಿಸಿದ ಗುಂಡು ದಸರಾ ಆನೆಯ ಹೊಟ್ಟೆ ಭಾಗಕ್ಕೆ ತಗುಲಿದೆ. ಅದೃಷ್ಟವಶಾತ್‌ ಬಲರಾಮ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹುಣಸೂರು ವನ್ಯಜೀವಿ ವಲಯದ ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ಗುರುವಾರ ರಾತ್ರಿ ಈ ಘಟನೆ ಸಂಭವಿಸಿದೆ. ಆರೋಪಿ ಸುರೇಶ್‌ ನನ್ನು ಬಂಧಿಸಲಾಗಿದ್ದು, ಕೋರ್ಟ್‌ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಗುರುವಾರ ಮೇಯಲು ಬಿಟ್ಟ ಆನೆ ಶಿಬಿರಕ್ಕೆ ಮರಳಿರಲಿಲ್ಲ. ಹುಡುಕಿಕೊಂಡು ಹೋದಾಗ ಬಲರಾಮ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ತಕ್ಷಣ ಆನೆಯನ್ನು ಭೀಮನಕಟ್ಟೆ ಶಿಬಿರಕ್ಕೆ ಕರೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಕಾಡತೂಸು ಬಳಸಿ ಗುಂಡು ಹಾರಿಸಲಾಗಿದ್ದು ಬಲರಾಮನ ಹೊಟ್ಟೆಯ ಭಾಗಕ್ಕೆ ಗುಂಡೇಟು ತಗುಲಿದೆ. ಗುಂಡಿನ ಭಾಗಗಳನ್ನು ದೇಹದಿಂದ ತೆಗೆಯಲಾಗಿದ್ದು ಆತಂಕಪಡುವ ಅಗತ್ಯವಿಲ್ಲ ಹುಣಸೂರು ವನ್ಯಜೀವಿ ವಿಭಾಗದ ಡಿಸಿಎಫ್‌ ಹರ್ಷಕುಮಾರ್‌ ಚಿಕ್ಕನರಗುಂದ ಆಂದೋಲನಕ್ಕೆ ತಿಳಿಸಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮತ್ತಿಗೋಡು ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಹೆಸರಿನ ಆನೆ ಕಳೆದ ತಿಂಗಳು (ನವೆಂಬರ್‌ 23) ಕಾಡಾನೆ ದಾಳಿಯಿಂದ ಮೃತಪಟ್ಟ ಬೆನ್ನಿಗೇ ಈ ದುರ್ಘಟನೆ ಸಂಭವಿಸಿದೆ.

ಅತ್ಯಂತ ಶಾಂತ ಸ್ವಭಾವದ 64 ವರ್ಷ ವಯಸ್ಸಿನ ಬಲರಾಮ ಈ ಬಾರಿಯೂ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿತ್ತು. 1996ರಿಂದ ದಸರಾದಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತಿರುವ ಬಲರಾಮ 1999ರಿಂದ 2011ರ ತನಕ ನಿರಂತರವಾಗಿ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ.

ದ್ರೋಣನ ಸಾವಿನ ಬಳಿಕ ಮೊದಲ ಬಾರಿ ಅರ್ಜುನ ಅಂಬಾರಿ ಹೊತ್ತು ನಡೆದಿದ್ದ. ಆದರೆ ಮಾವುತನನ್ನು ಸಾಯಿಸಿದ ಹಿನ್ನೆಲೆಯಲ್ಲಿ ಅರ್ಜುನನ ಬದಲು ಬಲರಾಮನಿಗೆ ಈ ಜವಾಬ್ದಾರಿ ಹೊರಿಸಲಾಗಿತ್ತು. ಬಲಗಣ್ಣಿನ ದೋಷವಿದ್ದರೂ ಬಲರಾಮ 13 ವರ್ಷಗಳ ಕಾಲ ಯಶಸ್ವಿಯಾಗಿ ತನ್ನ ಜವಾಬ್ದಾರಿಯನ್ನು ನಿಭಾಯಿಸಿದ್ದ. ವಯಸ್ಸಿನ ಕಾರಣಕ್ಕೆ ಅಂಬಾರಿ ಹೊಣೆಯಿಂದ ವಿಮುಕ್ತನಾದರೂ ಬಲರಾಮ ಈಗಲೂ ದಸರಾ ಗಜಪಡೆಯ ಕಾಯಂ ಸದಸ್ಯನಾಗಿ ಮುಂದುವರಿದಿದ್ದಾನೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago