BREAKING NEWS

ದಸರಾ ಆನೆ ಬಲರಾಮನಿಗೆ ಗುಂಡೇಟು

ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ದುರ್ಘಟನೆ, ಆರೋಪಿ ರೈತನ ಬಂಧನ

ಮೈಸೂರು: ಸತತ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ ಬಲರಾಮ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ. ಕಾಡಾನೆ ಎಂದು ಭಾವಿಸಿ ರೈತರೊಬ್ಬರು ಹಾರಿಸಿದ ಗುಂಡು ದಸರಾ ಆನೆಯ ಹೊಟ್ಟೆ ಭಾಗಕ್ಕೆ ತಗುಲಿದೆ. ಅದೃಷ್ಟವಶಾತ್‌ ಬಲರಾಮ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹುಣಸೂರು ವನ್ಯಜೀವಿ ವಲಯದ ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ಗುರುವಾರ ರಾತ್ರಿ ಈ ಘಟನೆ ಸಂಭವಿಸಿದೆ. ಆರೋಪಿ ಸುರೇಶ್‌ ನನ್ನು ಬಂಧಿಸಲಾಗಿದ್ದು, ಕೋರ್ಟ್‌ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಗುರುವಾರ ಮೇಯಲು ಬಿಟ್ಟ ಆನೆ ಶಿಬಿರಕ್ಕೆ ಮರಳಿರಲಿಲ್ಲ. ಹುಡುಕಿಕೊಂಡು ಹೋದಾಗ ಬಲರಾಮ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ತಕ್ಷಣ ಆನೆಯನ್ನು ಭೀಮನಕಟ್ಟೆ ಶಿಬಿರಕ್ಕೆ ಕರೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಕಾಡತೂಸು ಬಳಸಿ ಗುಂಡು ಹಾರಿಸಲಾಗಿದ್ದು ಬಲರಾಮನ ಹೊಟ್ಟೆಯ ಭಾಗಕ್ಕೆ ಗುಂಡೇಟು ತಗುಲಿದೆ. ಗುಂಡಿನ ಭಾಗಗಳನ್ನು ದೇಹದಿಂದ ತೆಗೆಯಲಾಗಿದ್ದು ಆತಂಕಪಡುವ ಅಗತ್ಯವಿಲ್ಲ ಹುಣಸೂರು ವನ್ಯಜೀವಿ ವಿಭಾಗದ ಡಿಸಿಎಫ್‌ ಹರ್ಷಕುಮಾರ್‌ ಚಿಕ್ಕನರಗುಂದ ಆಂದೋಲನಕ್ಕೆ ತಿಳಿಸಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮತ್ತಿಗೋಡು ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಹೆಸರಿನ ಆನೆ ಕಳೆದ ತಿಂಗಳು (ನವೆಂಬರ್‌ 23) ಕಾಡಾನೆ ದಾಳಿಯಿಂದ ಮೃತಪಟ್ಟ ಬೆನ್ನಿಗೇ ಈ ದುರ್ಘಟನೆ ಸಂಭವಿಸಿದೆ.

ಅತ್ಯಂತ ಶಾಂತ ಸ್ವಭಾವದ 64 ವರ್ಷ ವಯಸ್ಸಿನ ಬಲರಾಮ ಈ ಬಾರಿಯೂ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿತ್ತು. 1996ರಿಂದ ದಸರಾದಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತಿರುವ ಬಲರಾಮ 1999ರಿಂದ 2011ರ ತನಕ ನಿರಂತರವಾಗಿ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ.

ದ್ರೋಣನ ಸಾವಿನ ಬಳಿಕ ಮೊದಲ ಬಾರಿ ಅರ್ಜುನ ಅಂಬಾರಿ ಹೊತ್ತು ನಡೆದಿದ್ದ. ಆದರೆ ಮಾವುತನನ್ನು ಸಾಯಿಸಿದ ಹಿನ್ನೆಲೆಯಲ್ಲಿ ಅರ್ಜುನನ ಬದಲು ಬಲರಾಮನಿಗೆ ಈ ಜವಾಬ್ದಾರಿ ಹೊರಿಸಲಾಗಿತ್ತು. ಬಲಗಣ್ಣಿನ ದೋಷವಿದ್ದರೂ ಬಲರಾಮ 13 ವರ್ಷಗಳ ಕಾಲ ಯಶಸ್ವಿಯಾಗಿ ತನ್ನ ಜವಾಬ್ದಾರಿಯನ್ನು ನಿಭಾಯಿಸಿದ್ದ. ವಯಸ್ಸಿನ ಕಾರಣಕ್ಕೆ ಅಂಬಾರಿ ಹೊಣೆಯಿಂದ ವಿಮುಕ್ತನಾದರೂ ಬಲರಾಮ ಈಗಲೂ ದಸರಾ ಗಜಪಡೆಯ ಕಾಯಂ ಸದಸ್ಯನಾಗಿ ಮುಂದುವರಿದಿದ್ದಾನೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago