Mysore
22
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಸಿದ್ದು ಪರ ಅಖಾಡಕ್ಕಿಳಿದ ಸೊಸೆ : ಮಾವನಿಗೆ ಮತ ಹಾಕುವಂತೆ ಮನವಿ ಮಾಡಿದ ಸ್ಮಿತಾ ರಾಕೇಶ್‌

ಮೈಸೂರು : ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ತಮ್ಮ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಅವರು, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ.
ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ ಹಾಗೂ ನಟ ದುನಿಯಾ ವಿಜಯ್ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ನಡುವೆ ತಾವೂ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅತ್ಯಧಿಕ ಮತಗಳಿಂದ ಸಿದ್ದರಾಮಯ್ಯ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!