ಬೆಂಗಳೂರು : ರಾಜಕೀಯ ವ್ಯಕ್ತಿಗಳಿಗೆ ನೀಡಲಾಗುವ ಸರ್ಕಾರಿ ಸವಲತ್ತುಗಳನ್ನು ಅವರ ಮಕ್ಕಳು ಹಾಗೂ ಅವರ ಕುಟುಂಬ ವರ್ಗ ಅನುಭವಿಸುವುದು ನಮ್ಮ ದೇಶಕ್ಕೆ ಅಂಟಿದ ರೋಗ. ಇತ್ತೀಚೆಗೆ, ಅಸ್ತಿತ್ವಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರದಲ್ಲಿ ಸಕ್ಕರೆ ಸಚಿವರಾಗಿರುವ ಶಿವಾನಂದ ಪಾಟೀಲರ ಕುಟುಂಬದ ಸದಸ್ಯರೊಬ್ಬರ ವಿರುದ್ಧ ಇಂಥ ಟೀಕೆಗಳು ಕೇಳಿಬಂದಿವೆ.
ಸಚಿವರ ಪುತ್ರಿಯಾದ ಸಂಯುಕ್ತಾ ಪಾಟೀಲ್ ಅವರು ತಮ್ಮ ತಂದೆಗೆ ನೀಡಿರುವ ಸರ್ಕಾರಿ ಕಾರಿನಲ್ಲಿ ಕುಳಿತು ಬೆಂಗಳೂರಿನಲ್ಲಿ ಪ್ರಯಾಣಿಸುತ್ತಿದ್ದುದನ್ನು ನೋಡಿದ ಅನೇಕ ಸಾರ್ವಜನಿಕರು ಟೀಕೆ ಮಾಡಿದ್ದಾರೆ. ಇದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಲೇ ಸಚಿವರು ಪ್ರತಿಕ್ರಿಯೆ ನೀಡಿ, ತಮ್ಮ ಪುತ್ರಿಗೆ ಎಚ್ಚರಿಕೆ ನೀಡುವುದಾಗಿ ತಿಳಿಸಿದ್ದಾರೆ.
ಏನಿದು ವಿಚಾರ? : ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಪಡೆದಿರುವ ಸಚಿವ ಶಿವಾನಂದ ಪಾಟೀಲರಿಗೆ ರಾಜ್ಯ ಸರ್ಕಾರದ ವತಿಯಿಂದ ಸಹಜವಾಗಿ ಸಿಗುವ ಎಲ್ಲಾ ಸೌಲಭ್ಯಗಳ ಜೊತೆಗೆ ಅವರ ಸಂಚಾರಕ್ಕಾಗಿ ಐಶಾರಾಮಿ ಕಾರೊಂದನ್ನು ನೀಡಲಾಗಿದೆ. ನಿಯಮಗಳ ಪ್ರಕಾರ, ಸಚಿವರು ಸಹ ಸರ್ಕಾರಿ ನೌಕರರ ಸಾಲಿಗೆ ಸೇರುತ್ತಾದ್ದರಿಂದ ಸರ್ಕಾರದ ಕಾರನ್ನು ಕೇವಲ ಅವರು ಮಾತ್ರ ಬಳಸಬೇಕು. ಬೇರೆಯವರು ಬಳಸಬಾರದು ಅಥವಾ ಅವರು ಬೇರೆಯವರಿಗೆ ತಮಗೆ ನೀಡಲಾಗಿರುವ ಸೌಕರ್ಯಗಳನ್ನು ಬಳಸುವಂತೆ ನೀಡಲೂ ಬಾರದು.
ಸದಾಶಿವನಗರದಲ್ಲಿ ರೌಂಡ್ಸ್ : ಶಿವಾನಂದ ಪಾಟೀಲರ ವಿಚಾರದಲ್ಲಿ ಹಾಗಾಗಿಲ್ಲ. ಅವರ ಪುತ್ರಿ ಸಂಯುಕ್ತಾ ಪಾಟೀಲ್ ಅವರು ತಮ್ಮ ತಂದೆಗೆ ನೀಡಲಾಗಿರುವ ಸರ್ಕಾರಿ ಕಾರಿನಲ್ಲಿ ಕುಳಿತು, ಬೆಂಗಳೂರಿನ ಸದಾಶಿವ ನಗರದಲ್ಲಿ ರೌಂಡ್ಸ್ ಹೊಡೆದಿದ್ದಾರೆ. ಡ್ರೈವರ್ ಕಾರು ಚಲಾಯಿಸುತ್ತಿದ್ದರೆ, ಅವರ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಸಂಯುಕ್ತಾ ಅವರು, ತಮ್ಮ ಆಸನದ ಡೋರ್ ನ ಗಾಜನ್ನು ಇಳಿಸಿ, ನಗರ ಸೌಂದರ್ಯ ನೋಡುತ್ತಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ನೋಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಸುದ್ದಿ ಬಿತ್ತರಿಸಿದೆ.
ಕಾರಿನ ಮುಂದಿನ ಕರ್ನಾಟಕ ಸರ್ಕಾರದ ಲಾಂಛನವನ್ನು ನೋಡಿದ ಅನೇಕ ಸಾರ್ವಜನಿಕರು ಕಾರಿನೊಳಗೆ ಇಣುಕಿ ನೋಡಿದಾಗ ಕಾರಿನಲ್ಲಿ ಸಚಿವರೇ ಇಲ್ಲ ಎಂಬುದು ಗೊತ್ತಾಗಿದೆ. ಕೂಡಲೇ ಇದು ಸರ್ಕಾರಿ ಸೌಲಭ್ಯದ ದುರುಪಯೋಗ ಎಂದು ತಮ್ಮ ಮೊಬೈಲ್ ಗಳಿಂದ ಸಚಿವರ ಪುತ್ರಿಯು ಕಾರಿನಲ್ಲಿ ರೌಂಡ್ಸ್ ಹೊಡೆಯುತ್ತಿರುವುದನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲಾತಾಣದಲ್ಲಿ ಅಪ್ಲೋಡ್ ಮಾಡಿ, ಸಚಿವರ ಪುತ್ರಿಯ ಈ ನಡೆಯುನ್ನು ಟೀಕಿಸಿದ್ದಾರೆ. ಈ ಪೋಸ್ಟ್ ಗಳು ವೈರಲ್ ಆಗಿವೆ.
ಮಗಳಿಗೆ ಎಚ್ಚರಿಕೆ ನೀಡುತ್ತೇನೆ : ತಮ್ಮ ಪುತ್ರಿಯ ಬಗ್ಗೆ ಕೇಳಿಬಂದಿರುವ ಟೀಕೆಗಳಿಗೆ ಸಚಿವ ಶಿವಾನಂದ ಪಾಟೀಲರು ಉತ್ತರ ನೀಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿರುವ ಪ್ರತಿಕ್ರಿಯೆಯಲ್ಲಿ ಅವರು, “ಸರ್ಕಾರ ಕೊಟ್ಟಿರುವ ಅಧಿಕೃತ ಕಾರು ನನ್ನ ಬಳಿಯೇ ಇದೆ. ಬೋರ್ಡ್ ಇರುವ ಕಾರು ಬೆಂಗಳೂರಿನಲ್ಲಿದೆ. ಆ ಕಾರನ್ನು ಸಹ ನನ್ನ ಮಗಳು ಉಪಯೋಗಿಸಬಾರದು. ಅವರು ಯಾವ ಸಂದರ್ಭದಲ್ಲಿ ಅದನ್ನು ಉಪಯೋಗಿಸಿದ್ದಾರೋ ನನಗೆ ಗೊತ್ತಿಲ್ಲ. ನಾನು ಆ ಬಗ್ಗೆ ಮಾಹಿತಿ ಪಡೆಯುತ್ತೇನೆ. ನನ್ನ ಕಾರನ್ನು ಬಳಸಬಾರದೆಂದು ಮಗಳಿಗೆ ಎಚ್ಚರಿಕೆ ನೀಡುತ್ತೇನೆ” ಎಂದು ಹೇಳಿದ್ದಾರೆ.
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…