BREAKING NEWS

ಸಚಿವರ ಸರ್ಕಾರಿ ಕಾರಿನಲ್ಲಿ ಮಗಳ ಸುತ್ತಾಟ : ಸಾರ್ವಜನಿಕರಿಂದ ತೀವ್ರ ಆಕ್ಷೇಪ

ಬೆಂಗಳೂರು : ರಾಜಕೀಯ ವ್ಯಕ್ತಿಗಳಿಗೆ ನೀಡಲಾಗುವ ಸರ್ಕಾರಿ ಸವಲತ್ತುಗಳನ್ನು ಅವರ ಮಕ್ಕಳು ಹಾಗೂ ಅವರ ಕುಟುಂಬ ವರ್ಗ ಅನುಭವಿಸುವುದು ನಮ್ಮ ದೇಶಕ್ಕೆ ಅಂಟಿದ ರೋಗ. ಇತ್ತೀಚೆಗೆ, ಅಸ್ತಿತ್ವಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರದಲ್ಲಿ ಸಕ್ಕರೆ ಸಚಿವರಾಗಿರುವ ಶಿವಾನಂದ ಪಾಟೀಲರ ಕುಟುಂಬದ ಸದಸ್ಯರೊಬ್ಬರ ವಿರುದ್ಧ ಇಂಥ ಟೀಕೆಗಳು ಕೇಳಿಬಂದಿವೆ.

ಸಚಿವರ ಪುತ್ರಿಯಾದ ಸಂಯುಕ್ತಾ ಪಾಟೀಲ್ ಅವರು ತಮ್ಮ ತಂದೆಗೆ ನೀಡಿರುವ ಸರ್ಕಾರಿ ಕಾರಿನಲ್ಲಿ ಕುಳಿತು ಬೆಂಗಳೂರಿನಲ್ಲಿ ಪ್ರಯಾಣಿಸುತ್ತಿದ್ದುದನ್ನು ನೋಡಿದ ಅನೇಕ ಸಾರ್ವಜನಿಕರು ಟೀಕೆ ಮಾಡಿದ್ದಾರೆ. ಇದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಲೇ ಸಚಿವರು ಪ್ರತಿಕ್ರಿಯೆ ನೀಡಿ, ತಮ್ಮ ಪುತ್ರಿಗೆ ಎಚ್ಚರಿಕೆ ನೀಡುವುದಾಗಿ ತಿಳಿಸಿದ್ದಾರೆ.

ಏನಿದು ವಿಚಾರ? : ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಪಡೆದಿರುವ ಸಚಿವ ಶಿವಾನಂದ ಪಾಟೀಲರಿಗೆ ರಾಜ್ಯ ಸರ್ಕಾರದ ವತಿಯಿಂದ ಸಹಜವಾಗಿ ಸಿಗುವ ಎಲ್ಲಾ ಸೌಲಭ್ಯಗಳ ಜೊತೆಗೆ ಅವರ ಸಂಚಾರಕ್ಕಾಗಿ ಐಶಾರಾಮಿ ಕಾರೊಂದನ್ನು ನೀಡಲಾಗಿದೆ. ನಿಯಮಗಳ ಪ್ರಕಾರ, ಸಚಿವರು ಸಹ ಸರ್ಕಾರಿ ನೌಕರರ ಸಾಲಿಗೆ ಸೇರುತ್ತಾದ್ದರಿಂದ ಸರ್ಕಾರದ ಕಾರನ್ನು ಕೇವಲ ಅವರು ಮಾತ್ರ ಬಳಸಬೇಕು. ಬೇರೆಯವರು ಬಳಸಬಾರದು ಅಥವಾ ಅವರು ಬೇರೆಯವರಿಗೆ ತಮಗೆ ನೀಡಲಾಗಿರುವ ಸೌಕರ್ಯಗಳನ್ನು ಬಳಸುವಂತೆ ನೀಡಲೂ ಬಾರದು.

ಸದಾಶಿವನಗರದಲ್ಲಿ ರೌಂಡ್ಸ್ : ಶಿವಾನಂದ ಪಾಟೀಲರ ವಿಚಾರದಲ್ಲಿ ಹಾಗಾಗಿಲ್ಲ. ಅವರ ಪುತ್ರಿ ಸಂಯುಕ್ತಾ ಪಾಟೀಲ್ ಅವರು ತಮ್ಮ ತಂದೆಗೆ ನೀಡಲಾಗಿರುವ ಸರ್ಕಾರಿ ಕಾರಿನಲ್ಲಿ ಕುಳಿತು, ಬೆಂಗಳೂರಿನ ಸದಾಶಿವ ನಗರದಲ್ಲಿ ರೌಂಡ್ಸ್ ಹೊಡೆದಿದ್ದಾರೆ. ಡ್ರೈವರ್ ಕಾರು ಚಲಾಯಿಸುತ್ತಿದ್ದರೆ, ಅವರ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಸಂಯುಕ್ತಾ ಅವರು, ತಮ್ಮ ಆಸನದ ಡೋರ್ ನ ಗಾಜನ್ನು ಇಳಿಸಿ, ನಗರ ಸೌಂದರ್ಯ ನೋಡುತ್ತಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ನೋಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಸುದ್ದಿ ಬಿತ್ತರಿಸಿದೆ.

ಕಾರಿನ ಮುಂದಿನ ಕರ್ನಾಟಕ ಸರ್ಕಾರದ ಲಾಂಛನವನ್ನು ನೋಡಿದ ಅನೇಕ ಸಾರ್ವಜನಿಕರು ಕಾರಿನೊಳಗೆ ಇಣುಕಿ ನೋಡಿದಾಗ ಕಾರಿನಲ್ಲಿ ಸಚಿವರೇ ಇಲ್ಲ ಎಂಬುದು ಗೊತ್ತಾಗಿದೆ. ಕೂಡಲೇ ಇದು ಸರ್ಕಾರಿ ಸೌಲಭ್ಯದ ದುರುಪಯೋಗ ಎಂದು ತಮ್ಮ ಮೊಬೈಲ್ ಗಳಿಂದ ಸಚಿವರ ಪುತ್ರಿಯು ಕಾರಿನಲ್ಲಿ ರೌಂಡ್ಸ್ ಹೊಡೆಯುತ್ತಿರುವುದನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲಾತಾಣದಲ್ಲಿ ಅಪ್ಲೋಡ್ ಮಾಡಿ, ಸಚಿವರ ಪುತ್ರಿಯ ಈ ನಡೆಯುನ್ನು ಟೀಕಿಸಿದ್ದಾರೆ. ಈ ಪೋಸ್ಟ್ ಗಳು ವೈರಲ್ ಆಗಿವೆ.

ಮಗಳಿಗೆ ಎಚ್ಚರಿಕೆ ನೀಡುತ್ತೇನೆ : ತಮ್ಮ ಪುತ್ರಿಯ ಬಗ್ಗೆ ಕೇಳಿಬಂದಿರುವ ಟೀಕೆಗಳಿಗೆ ಸಚಿವ ಶಿವಾನಂದ ಪಾಟೀಲರು ಉತ್ತರ ನೀಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿರುವ ಪ್ರತಿಕ್ರಿಯೆಯಲ್ಲಿ ಅವರು, “ಸರ್ಕಾರ ಕೊಟ್ಟಿರುವ ಅಧಿಕೃತ ಕಾರು ನನ್ನ ಬಳಿಯೇ ಇದೆ. ಬೋರ್ಡ್ ಇರುವ ಕಾರು ಬೆಂಗಳೂರಿನಲ್ಲಿದೆ. ಆ ಕಾರನ್ನು ಸಹ ನನ್ನ ಮಗಳು ಉಪಯೋಗಿಸಬಾರದು. ಅವರು ಯಾವ ಸಂದರ್ಭದಲ್ಲಿ ಅದನ್ನು ಉಪಯೋಗಿಸಿದ್ದಾರೋ ನನಗೆ ಗೊತ್ತಿಲ್ಲ. ನಾನು ಆ ಬಗ್ಗೆ ಮಾಹಿತಿ ಪಡೆಯುತ್ತೇನೆ. ನನ್ನ ಕಾರನ್ನು ಬಳಸಬಾರದೆಂದು ಮಗಳಿಗೆ ಎಚ್ಚರಿಕೆ ನೀಡುತ್ತೇನೆ” ಎಂದು ಹೇಳಿದ್ದಾರೆ.

lokesh

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

6 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

6 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

7 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

7 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

7 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

8 hours ago