BREAKING NEWS

ಸಚಿವರ ಸರ್ಕಾರಿ ಕಾರಿನಲ್ಲಿ ಮಗಳ ಸುತ್ತಾಟ : ಸಾರ್ವಜನಿಕರಿಂದ ತೀವ್ರ ಆಕ್ಷೇಪ

ಬೆಂಗಳೂರು : ರಾಜಕೀಯ ವ್ಯಕ್ತಿಗಳಿಗೆ ನೀಡಲಾಗುವ ಸರ್ಕಾರಿ ಸವಲತ್ತುಗಳನ್ನು ಅವರ ಮಕ್ಕಳು ಹಾಗೂ ಅವರ ಕುಟುಂಬ ವರ್ಗ ಅನುಭವಿಸುವುದು ನಮ್ಮ ದೇಶಕ್ಕೆ ಅಂಟಿದ ರೋಗ. ಇತ್ತೀಚೆಗೆ, ಅಸ್ತಿತ್ವಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರದಲ್ಲಿ ಸಕ್ಕರೆ ಸಚಿವರಾಗಿರುವ ಶಿವಾನಂದ ಪಾಟೀಲರ ಕುಟುಂಬದ ಸದಸ್ಯರೊಬ್ಬರ ವಿರುದ್ಧ ಇಂಥ ಟೀಕೆಗಳು ಕೇಳಿಬಂದಿವೆ.

ಸಚಿವರ ಪುತ್ರಿಯಾದ ಸಂಯುಕ್ತಾ ಪಾಟೀಲ್ ಅವರು ತಮ್ಮ ತಂದೆಗೆ ನೀಡಿರುವ ಸರ್ಕಾರಿ ಕಾರಿನಲ್ಲಿ ಕುಳಿತು ಬೆಂಗಳೂರಿನಲ್ಲಿ ಪ್ರಯಾಣಿಸುತ್ತಿದ್ದುದನ್ನು ನೋಡಿದ ಅನೇಕ ಸಾರ್ವಜನಿಕರು ಟೀಕೆ ಮಾಡಿದ್ದಾರೆ. ಇದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಲೇ ಸಚಿವರು ಪ್ರತಿಕ್ರಿಯೆ ನೀಡಿ, ತಮ್ಮ ಪುತ್ರಿಗೆ ಎಚ್ಚರಿಕೆ ನೀಡುವುದಾಗಿ ತಿಳಿಸಿದ್ದಾರೆ.

ಏನಿದು ವಿಚಾರ? : ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಪಡೆದಿರುವ ಸಚಿವ ಶಿವಾನಂದ ಪಾಟೀಲರಿಗೆ ರಾಜ್ಯ ಸರ್ಕಾರದ ವತಿಯಿಂದ ಸಹಜವಾಗಿ ಸಿಗುವ ಎಲ್ಲಾ ಸೌಲಭ್ಯಗಳ ಜೊತೆಗೆ ಅವರ ಸಂಚಾರಕ್ಕಾಗಿ ಐಶಾರಾಮಿ ಕಾರೊಂದನ್ನು ನೀಡಲಾಗಿದೆ. ನಿಯಮಗಳ ಪ್ರಕಾರ, ಸಚಿವರು ಸಹ ಸರ್ಕಾರಿ ನೌಕರರ ಸಾಲಿಗೆ ಸೇರುತ್ತಾದ್ದರಿಂದ ಸರ್ಕಾರದ ಕಾರನ್ನು ಕೇವಲ ಅವರು ಮಾತ್ರ ಬಳಸಬೇಕು. ಬೇರೆಯವರು ಬಳಸಬಾರದು ಅಥವಾ ಅವರು ಬೇರೆಯವರಿಗೆ ತಮಗೆ ನೀಡಲಾಗಿರುವ ಸೌಕರ್ಯಗಳನ್ನು ಬಳಸುವಂತೆ ನೀಡಲೂ ಬಾರದು.

ಸದಾಶಿವನಗರದಲ್ಲಿ ರೌಂಡ್ಸ್ : ಶಿವಾನಂದ ಪಾಟೀಲರ ವಿಚಾರದಲ್ಲಿ ಹಾಗಾಗಿಲ್ಲ. ಅವರ ಪುತ್ರಿ ಸಂಯುಕ್ತಾ ಪಾಟೀಲ್ ಅವರು ತಮ್ಮ ತಂದೆಗೆ ನೀಡಲಾಗಿರುವ ಸರ್ಕಾರಿ ಕಾರಿನಲ್ಲಿ ಕುಳಿತು, ಬೆಂಗಳೂರಿನ ಸದಾಶಿವ ನಗರದಲ್ಲಿ ರೌಂಡ್ಸ್ ಹೊಡೆದಿದ್ದಾರೆ. ಡ್ರೈವರ್ ಕಾರು ಚಲಾಯಿಸುತ್ತಿದ್ದರೆ, ಅವರ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಸಂಯುಕ್ತಾ ಅವರು, ತಮ್ಮ ಆಸನದ ಡೋರ್ ನ ಗಾಜನ್ನು ಇಳಿಸಿ, ನಗರ ಸೌಂದರ್ಯ ನೋಡುತ್ತಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ನೋಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಸುದ್ದಿ ಬಿತ್ತರಿಸಿದೆ.

ಕಾರಿನ ಮುಂದಿನ ಕರ್ನಾಟಕ ಸರ್ಕಾರದ ಲಾಂಛನವನ್ನು ನೋಡಿದ ಅನೇಕ ಸಾರ್ವಜನಿಕರು ಕಾರಿನೊಳಗೆ ಇಣುಕಿ ನೋಡಿದಾಗ ಕಾರಿನಲ್ಲಿ ಸಚಿವರೇ ಇಲ್ಲ ಎಂಬುದು ಗೊತ್ತಾಗಿದೆ. ಕೂಡಲೇ ಇದು ಸರ್ಕಾರಿ ಸೌಲಭ್ಯದ ದುರುಪಯೋಗ ಎಂದು ತಮ್ಮ ಮೊಬೈಲ್ ಗಳಿಂದ ಸಚಿವರ ಪುತ್ರಿಯು ಕಾರಿನಲ್ಲಿ ರೌಂಡ್ಸ್ ಹೊಡೆಯುತ್ತಿರುವುದನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲಾತಾಣದಲ್ಲಿ ಅಪ್ಲೋಡ್ ಮಾಡಿ, ಸಚಿವರ ಪುತ್ರಿಯ ಈ ನಡೆಯುನ್ನು ಟೀಕಿಸಿದ್ದಾರೆ. ಈ ಪೋಸ್ಟ್ ಗಳು ವೈರಲ್ ಆಗಿವೆ.

ಮಗಳಿಗೆ ಎಚ್ಚರಿಕೆ ನೀಡುತ್ತೇನೆ : ತಮ್ಮ ಪುತ್ರಿಯ ಬಗ್ಗೆ ಕೇಳಿಬಂದಿರುವ ಟೀಕೆಗಳಿಗೆ ಸಚಿವ ಶಿವಾನಂದ ಪಾಟೀಲರು ಉತ್ತರ ನೀಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿರುವ ಪ್ರತಿಕ್ರಿಯೆಯಲ್ಲಿ ಅವರು, “ಸರ್ಕಾರ ಕೊಟ್ಟಿರುವ ಅಧಿಕೃತ ಕಾರು ನನ್ನ ಬಳಿಯೇ ಇದೆ. ಬೋರ್ಡ್ ಇರುವ ಕಾರು ಬೆಂಗಳೂರಿನಲ್ಲಿದೆ. ಆ ಕಾರನ್ನು ಸಹ ನನ್ನ ಮಗಳು ಉಪಯೋಗಿಸಬಾರದು. ಅವರು ಯಾವ ಸಂದರ್ಭದಲ್ಲಿ ಅದನ್ನು ಉಪಯೋಗಿಸಿದ್ದಾರೋ ನನಗೆ ಗೊತ್ತಿಲ್ಲ. ನಾನು ಆ ಬಗ್ಗೆ ಮಾಹಿತಿ ಪಡೆಯುತ್ತೇನೆ. ನನ್ನ ಕಾರನ್ನು ಬಳಸಬಾರದೆಂದು ಮಗಳಿಗೆ ಎಚ್ಚರಿಕೆ ನೀಡುತ್ತೇನೆ” ಎಂದು ಹೇಳಿದ್ದಾರೆ.

lokesh

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago