ದಾವಣಗೆರೆ : ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ನಿಗೂಢ ಸಾವಿನ ವಿಚಾರ ಇದೀಗ ಬಹಿರಂಗಗೊಂಡಿದ್ದು, ಪುತ್ರ ಹಾಗೂ ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ಪತಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ.
ಮೃತ ಯೋಗೇಶ್ ಹೊನ್ನಾಳ ದಾವಣಗೆರೆ ಜಿಲ್ಲೆಯ ಜಗಳೂರು (Jagaluru) ತಾಲೂಕಿನ ಹಾಲೆಕಲ್ಲು ಗ್ರಾಮದವರಾಗಿದ್ದು, ಎಂಜಿನಿಯರ್ ಪದವಿ ಪಡೆದಿದ್ದರು. ಪತ್ನಿ ಪ್ರತಿಭಾ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 9 ವರ್ಷದ ಹಿಂದೆ ವಿವಾಹವಾಗಿತ್ತು. ದಂಪತಿಗೆ ಯಶ್ ಎಂಬ 6 ವರ್ಷದ ಮಗ ಕೂಡಾ ಇದ್ದ. ಇಬ್ಬರ ಬದುಕು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಕಳೆದ ಎರಡು ದಿನಗಳಿಂದ ದಂಪತಿ ಯಾರೂ ಮನೆಯಿಂದ ಹೊರಗೆ ಬಾರದೇ ಇರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆ ಬಳಿ ಬಂದು ಗಮನಿಸಿದಾಗ ಪೊಲೀಸರಿಗೆ ಮೂವರು ಮೃತಪಟ್ಟಿರುವುದು ಗೊತ್ತಾಗಿದೆ. ತಕ್ಷಣ ಬೆಂಗಳೂರಿನಲ್ಲಿ ಇದ್ದ ಯೋಗೇಶ್ ಸಹೋದರನಿಗೆ ಫೋನ್ ಮೂಲಕ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸಹೋದರ ದಾವಣಗೆರೆಯ ವಿದ್ಯಾನಗರದಲ್ಲಿ ವಾಸವಾಗಿರುವ ಯೋಗೇಶ್ ತಾಯಿ ಶೋಭಾ ಮತ್ತು ಪ್ರತಿಭಾಳ ತಂದೆ ಅಮರ್ನಾಥ್ಗೆ ವಿಷಯ ಮುಟ್ಟಿಸಿದ್ದಾರೆ.
ಆದರೆ ಬಾಲ್ಟಿಮೋರ್ ಕೌಂಟಿ ಪೊಲೀಸರು ಪ್ರಾಥಮಿಕ ಹೇಳಿಕೆ ಬಿಡುಗಡೆ ಮಾಡಿದ್ದು, ಪತಿ ಮತ್ತು ಪತ್ನಿಯ ನಡುವಿನ ಕಲಹವೇ ಘಟನೆಗೆ ಕಾರಣ ಎನ್ನಲಾಗಿದೆ. ಪುತ್ರ ಯಶ್ ಹಾಗೂ ಪತ್ನಿ ಪ್ರತಿಭಾಳ ಹತ್ಯೆ ನಡೆಸಿ ನಂತರ ಪತಿ ಯೋಗೇಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ. ಆಗಸ್ಟ್ 15ರಂದು ರಾತ್ರಿ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದ್ದು, ಆಗಸ್ಟ್ 18ರಂದು ಬಾಲ್ಟಿಮೋರ್ ಪೊಲೀಸರಿಂದ ಘಟನೆ ಕುರಿತು ಮಾಹಿತಿ ಹೊರಬಿದ್ದಿತ್ತು.
ಮೂರು ಜನರ ಮೃತದೇಹವನ್ನು ದಾವಣಗೆರೆಗೆ ತರಿಸಬೇಕು ಎಂದು ಯೋಗೇಶ್ ತಾಯಿ ಶೋಭಾ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಇವರ ಮನವಿಯನ್ನು ವಿದೇಶಾಂಗ ಸಚಿವಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್, ಕುಟುಂಬದ ಕೋರಿಕೆ ಮೇರೆಗೆ ಅಮೆರಿಕದಲ್ಲಿರುವ ಕನ್ಸಲ್ ಜನರಲ್ ಮಂಜುನಾಥ್, ಡೆಪ್ಯೂಟಿ ಜನರಲ್ ವರುಣ್ ಅವರನ್ನು ಆನ್ಲೈನ್ ಮುಖಾಂತರ ಸಂಪರ್ಕ ಮಾಡಿದ್ದೇವೆ. ಅಲ್ಲದೇ ಕೌನ್ಸಿಲ್ ಮಾಹಿತಿ ರವಾನೆ ಮಾಡಲಾಗಿದೆ. ಮೃತದೇಹವನ್ನು ದಾವಣಗೆರೆಗೆ ತರುವ ಕುರಿತು ಚರ್ಚೆ ನಡೆಯುತ್ತಿದೆ ಎಂದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…