BREAKING NEWS

ಅಮೆರಿಕದಲ್ಲಿ ದಾವಣಗೆರೆ ದಂಪತಿ ನಿಗೂಢ ಸಾವು ಪ್ರಕರಣ : ಪತ್ನಿ-ಮಗುವಿಗೆ ಗುಂಡು ಹಾರಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ

ದಾವಣಗೆರೆ : ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ನಿಗೂಢ ಸಾವಿನ ವಿಚಾರ ಇದೀಗ ಬಹಿರಂಗಗೊಂಡಿದ್ದು, ಪುತ್ರ ಹಾಗೂ ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ಪತಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ.

ಮೃತ ಯೋಗೇಶ್ ಹೊನ್ನಾಳ ದಾವಣಗೆರೆ ಜಿಲ್ಲೆಯ ಜಗಳೂರು (Jagaluru) ತಾಲೂಕಿನ ಹಾಲೆಕಲ್ಲು ಗ್ರಾಮದವರಾಗಿದ್ದು, ಎಂಜಿನಿಯರ್ ಪದವಿ ಪಡೆದಿದ್ದರು. ಪತ್ನಿ ಪ್ರತಿಭಾ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 9 ವರ್ಷದ ಹಿಂದೆ ವಿವಾಹವಾಗಿತ್ತು. ದಂಪತಿಗೆ ಯಶ್ ಎಂಬ 6 ವರ್ಷದ ಮಗ ಕೂಡಾ ಇದ್ದ. ಇಬ್ಬರ ಬದುಕು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಕಳೆದ ಎರಡು ದಿನಗಳಿಂದ ದಂಪತಿ ಯಾರೂ ಮನೆಯಿಂದ ಹೊರಗೆ ಬಾರದೇ ಇರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆ ಬಳಿ ಬಂದು ಗಮನಿಸಿದಾಗ ಪೊಲೀಸರಿಗೆ ಮೂವರು ಮೃತಪಟ್ಟಿರುವುದು ಗೊತ್ತಾಗಿದೆ. ತಕ್ಷಣ ಬೆಂಗಳೂರಿನಲ್ಲಿ ಇದ್ದ ಯೋಗೇಶ್ ಸಹೋದರನಿಗೆ ಫೋನ್ ಮೂಲಕ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸಹೋದರ ದಾವಣಗೆರೆಯ ವಿದ್ಯಾನಗರದಲ್ಲಿ ವಾಸವಾಗಿರುವ ಯೋಗೇಶ್ ತಾಯಿ ಶೋಭಾ ಮತ್ತು ಪ್ರತಿಭಾಳ ತಂದೆ ಅಮರ್‌ನಾಥ್‌ಗೆ ವಿಷಯ ಮುಟ್ಟಿಸಿದ್ದಾರೆ.

ಆದರೆ ಬಾಲ್ಟಿಮೋರ್ ಕೌಂಟಿ ಪೊಲೀಸರು ಪ್ರಾಥಮಿಕ ಹೇಳಿಕೆ ಬಿಡುಗಡೆ ಮಾಡಿದ್ದು, ಪತಿ ಮತ್ತು ಪತ್ನಿಯ ನಡುವಿನ ಕಲಹವೇ ಘಟನೆಗೆ ಕಾರಣ ಎನ್ನಲಾಗಿದೆ. ಪುತ್ರ ಯಶ್ ಹಾಗೂ ಪತ್ನಿ ಪ್ರತಿಭಾಳ ಹತ್ಯೆ ನಡೆಸಿ ನಂತರ ಪತಿ ಯೋಗೇಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ. ಆಗಸ್ಟ್ 15ರಂದು ರಾತ್ರಿ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದ್ದು, ಆಗಸ್ಟ್ 18ರಂದು ಬಾಲ್ಟಿಮೋರ್ ಪೊಲೀಸರಿಂದ ಘಟನೆ ಕುರಿತು ಮಾಹಿತಿ ಹೊರಬಿದ್ದಿತ್ತು.

ಮೂರು ಜನರ ಮೃತದೇಹವನ್ನು ದಾವಣಗೆರೆಗೆ ತರಿಸಬೇಕು ಎಂದು ಯೋಗೇಶ್ ತಾಯಿ ಶೋಭಾ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಇವರ ಮನವಿಯನ್ನು ವಿದೇಶಾಂಗ ಸಚಿವಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್, ಕುಟುಂಬದ ಕೋರಿಕೆ ಮೇರೆಗೆ ಅಮೆರಿಕದಲ್ಲಿರುವ ಕನ್ಸಲ್ ಜನರಲ್ ಮಂಜುನಾಥ್, ಡೆಪ್ಯೂಟಿ ಜನರಲ್ ವರುಣ್ ಅವರನ್ನು ಆನ್‌ಲೈನ್ ಮುಖಾಂತರ ಸಂಪರ್ಕ ಮಾಡಿದ್ದೇವೆ. ಅಲ್ಲದೇ ಕೌನ್ಸಿಲ್ ಮಾಹಿತಿ ರವಾನೆ ಮಾಡಲಾಗಿದೆ. ಮೃತದೇಹವನ್ನು ದಾವಣಗೆರೆಗೆ ತರುವ ಕುರಿತು ಚರ್ಚೆ ನಡೆಯುತ್ತಿದೆ ಎಂದರು.

lokesh

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago