BREAKING NEWS

ಸತೀಶ್ ಜಾರಕಿಹೊಳಿ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯ ಸಭೆ!

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಗೌಪ್ಯ ಸಭೆ ನಡೆಸಿದ್ದಾರೆ. ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ನಡೆದಿರುವ ಈ ಸಭೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ವಿಶೇಷವಾಗಿ ಕಾಂಗ್ರೆಸ್‌ನಲ್ಲಿ ಊಹಾಪೋಹಗಳನ್ನು ಹುಟ್ಟುಹಾಕಿದೆ.

ಸಭೆ ಮುಗಿದ ಕೂಡಲೇ ಶಿವಕುಮಾರ್ ನವದೆಹಲಿಗೆ ತೆರಳಿದ್ದಾರೆ. ಈ ಹಿಂದೆ ಜಾರಕಿಹೊಳಿ ತಮ್ಮ ತವರು ಜಿಲ್ಲೆ ಬೆಳಗಾವಿಯಲ್ಲಿ ಶಿವಕುಮಾರ್ ಹಸ್ತಕ್ಷೇಪದ ಬಗ್ಗೆ ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಜಿಲ್ಲೆಯಲ್ಲಿ ಜಾರಕಿಹೊಳಿ ಕುಟುಂಬದ ಪ್ರಾಬಲ್ಯಕ್ಕೆ ಸವಾಲು ಹಾಕಿ ಲಿಂಗಾಯತ ನಾಯಕಿಯಾಗಿ ಹೊರಹೊಮ್ಮುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಶಿವಕುಮಾರ್ ನೀಡಿದ ಪ್ರಾಮುಖ್ಯತೆ ಮತ್ತು ಬೆಂಬಲದಿಂದ ಪಿಡಬ್ಲ್ಯೂಡಿ ಸಚಿವರು ಅಸಮಾಧಾನಗೊಂಡಿದ್ದರು.

ಇತ್ತೀಚೆಗೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದಾಗ ಅವರಿಗೆ ಸ್ವಾಗತ ಕೋರುವ ಕಾರ್ಯಕ್ರಮದಿಂದಲೂ ಸತೀಶ್ ಜಾರಕಿಹೊಳಿ ಹೊರಗುಳಿದಿದ್ದರು. ಅಲ್ಲದೇ, ಶಿವಕುಮಾರ್ ಅವರನ್ನು ಹೊರಗಿಟ್ಟು ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಡಿನ್ನರ್ ಮೀಟ್‌ನಲ್ಲಿ ಹಾಜರಾಗಿದ್ದರು. ಈ ಬೆಳವಣಿಗೆ ದೊಡ್ಡ ಸಂಚಲನ ಮೂಡಿಸಿತ್ತು. 2028ರಲ್ಲಿ ಸಿಎಂ ಸ್ಥಾನಕ್ಕೆ ನಾನು ಕೂಡಾ ಸ್ಪರ್ಧಿ ಎಂದು ಜಾರಕಿಹೊಳಿ ಹೇಳಿದ್ದರು.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಾರಕಿಹೊಳಿ, ಶಿವಕುಮಾರ್, ಪಕ್ಷ ಸಂಘಟನೆ, ಲೋಕಸಭೆ ಚುನಾವಣೆ, ಜಿಲ್ಲಾಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದಂತೆ ತಮ್ಮೊಂದಿಗೆ ಚರ್ಚೆ ನಡೆಸಿದ್ದಾರೆ. ಅದನ್ನು ಬಿಟ್ಟು ಬೇರೆ ವಿಷಯ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದರು. ಆದರೆ ಈ ಸಭೆಯ ಮೂಲಕ ಸಚಿವ ಜಾರಕಿಹೊಳಿ ಅವರೊಂದಿಗಿನ ಅಸಮಾಧಾನ ನಿವಾರಿಸಲು ಶಿವಕುಮಾರ್ ಬಯಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಚರ್ಚಿಸಲು ಶಿವಕುಮಾರ್ ನವದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

andolanait

Recent Posts

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

14 mins ago

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

34 mins ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

1 hour ago

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

2 hours ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

2 hours ago

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

3 hours ago