ಬೆಂಗಳೂರು : ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಕ್ಕಳನ್ನು ಮಾರಟ ಮಾಡುತ್ತಿದ್ದ ಡೆಡ್ಲಿ ಜಾಲವೊಂದು ಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಹಸುಗೂಸುಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ ಮಾಡುತ್ತಿರುವ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ.
ಬೆಂಗಳೂರಿನ ರಾಜ ರಾಜೇಶ್ವರಿ ನಗರದಲ್ಲಿ 20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಮತ್ತು ಶರಣ್ಯ ಬಂಧಿತ ಆರೋಪಿಗಳು.
ಸಧ್ಯ ಮಾರಾಟ ಮಾಡಲು ತಂದಿದ್ದ 20 ದಿನದ ಎಳೆಯ ಮಗುವನ್ನು ಪೊಲೀಸರು ರಕ್ಷಣೆ ಮಾಡಿದ್ದು, ಆರೋಪಿಗಳ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳು ಇನ್ನೂ ಹೆಚ್ಚಿನ ಮಕ್ಕಳನ್ನು ಇದೇ ರೀತಿ ಮಾರಾಟ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಈ ಖತರ್ನಾಕ್ ಗ್ಯಾಂಗ್ ಕೇವಲ 10 ರಿಂದ 20 ದಿನಗಳ ಹಸುಗೂಸುಗಳನ್ನು ಮಾರಾಟ ಮಾಡುತ್ತಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇರುವ ಗರ್ಭಿಣಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್ ಮಗು ಹೆತ್ತು ಕೊಟ್ಟರೆ 3 ಲಕ್ಷ ರೂ. ಹಣ ಕೊಡುವುದಾಗಿ ಆಮಿಷವೊಡ್ಡಿ ಮಕ್ಕಳನ್ನು ಪಡೆಯುತ್ತಿದ್ದರು. ಅದಷ್ಟೇ ಅಲ್ಲದೇ ಅಬಾರ್ಷನ್ ಗೆ ಬರುವ ಮಹಿಳೆಯರನ್ನು ಪತ್ತೆ ಹಚ್ಚಿ ಅವರಿಗೂ ಕೂಡ ಇದೇ ರೀತಿಯ ಆಮಿಷ ಒಡ್ಡುತ್ತಿತ್ತು. ಹೀಗೆ ಪಡೆದ ಮಕ್ಕಳನ್ನು ಮಕ್ಕಳಿಲ್ಲದ ದಂಪತಿಗಳಿಗೆ 8 ರಿಂದ 10 ಲಕ್ಷ ರೂ. ಗೆ ಮಾರಾಟ ಮಾಡುತ್ತು. ಈ ಗ್ಯಾಂಗ್ ನೊಂದಿಗೆ ಕೆಲವು ಆಸ್ಪತ್ರೆಗಳು, ಐ ವಿ ಎಫ್ ಸೆಂಟರ್ ಗಳು ರಕ್ತ ಪರೀಕ್ಷೆ ಕೃಂದ್ರಗಳೂ ಕೂಡ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…