ಬೆಂಗಳೂರು : ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಕ್ಕಳನ್ನು ಮಾರಟ ಮಾಡುತ್ತಿದ್ದ ಡೆಡ್ಲಿ ಜಾಲವೊಂದು ಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಹಸುಗೂಸುಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ ಮಾಡುತ್ತಿರುವ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ.
ಬೆಂಗಳೂರಿನ ರಾಜ ರಾಜೇಶ್ವರಿ ನಗರದಲ್ಲಿ 20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಮತ್ತು ಶರಣ್ಯ ಬಂಧಿತ ಆರೋಪಿಗಳು.
ಸಧ್ಯ ಮಾರಾಟ ಮಾಡಲು ತಂದಿದ್ದ 20 ದಿನದ ಎಳೆಯ ಮಗುವನ್ನು ಪೊಲೀಸರು ರಕ್ಷಣೆ ಮಾಡಿದ್ದು, ಆರೋಪಿಗಳ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳು ಇನ್ನೂ ಹೆಚ್ಚಿನ ಮಕ್ಕಳನ್ನು ಇದೇ ರೀತಿ ಮಾರಾಟ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಈ ಖತರ್ನಾಕ್ ಗ್ಯಾಂಗ್ ಕೇವಲ 10 ರಿಂದ 20 ದಿನಗಳ ಹಸುಗೂಸುಗಳನ್ನು ಮಾರಾಟ ಮಾಡುತ್ತಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇರುವ ಗರ್ಭಿಣಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್ ಮಗು ಹೆತ್ತು ಕೊಟ್ಟರೆ 3 ಲಕ್ಷ ರೂ. ಹಣ ಕೊಡುವುದಾಗಿ ಆಮಿಷವೊಡ್ಡಿ ಮಕ್ಕಳನ್ನು ಪಡೆಯುತ್ತಿದ್ದರು. ಅದಷ್ಟೇ ಅಲ್ಲದೇ ಅಬಾರ್ಷನ್ ಗೆ ಬರುವ ಮಹಿಳೆಯರನ್ನು ಪತ್ತೆ ಹಚ್ಚಿ ಅವರಿಗೂ ಕೂಡ ಇದೇ ರೀತಿಯ ಆಮಿಷ ಒಡ್ಡುತ್ತಿತ್ತು. ಹೀಗೆ ಪಡೆದ ಮಕ್ಕಳನ್ನು ಮಕ್ಕಳಿಲ್ಲದ ದಂಪತಿಗಳಿಗೆ 8 ರಿಂದ 10 ಲಕ್ಷ ರೂ. ಗೆ ಮಾರಾಟ ಮಾಡುತ್ತು. ಈ ಗ್ಯಾಂಗ್ ನೊಂದಿಗೆ ಕೆಲವು ಆಸ್ಪತ್ರೆಗಳು, ಐ ವಿ ಎಫ್ ಸೆಂಟರ್ ಗಳು ರಕ್ತ ಪರೀಕ್ಷೆ ಕೃಂದ್ರಗಳೂ ಕೂಡ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…