BREAKING NEWS

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ:- ಗಣ್ಯರಿಂದ ನುಡಿನಮನ

ಬೆಂಗಳೂರು: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಪಾರ ಭಕ್ತರನ್ನು ಹೊಂದಿದ್ದ ಶ್ರೀಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ನುಡಿನಮನ ಸಲ್ಲಿಸಿದ್ದಾರೆ.

‘ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ’ ಎಂದಿದ್ದಾರೆ.

‘ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು’ ಎಂದು ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.

‘ಶ್ರವಣಬೆಳಗೊಳದ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು. ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ. ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

‘ಶ್ರವಣಬೆಳಗೊಳದ ಜೈನಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರು ಅಗಲಿದ ವಿಷಯ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಶ್ರೀ ಭಗವಾನ್ ಬಾಹುಬಲಿ ಅವರ ಶಾಂತಿ, ಅಹಿಂಸೆ, ಸಹನೆ ತತ್ವಗಳನ್ನು ಪಸರಿಸುತ್ತಾ ಜನರಲ್ಲಿ ಅರಿವಿನ ಬೆಳಕು ಮೂಡಿಸಿದ್ದ ಪರಮಪೂಜ್ಯರು ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದರು’ ಎಂದು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ನುಡಿನಮನ ಸಲ್ಲಿಸಿದ್ದಾರೆ.

ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರನ್ನು ಆಂಬುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ವಸ್ಥಿಶ್ರೀ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿ ದೇಶದಾದ್ಯಂತ ಅಪಾರ ಭಕ್ತ ವರ್ಗವನ್ನು ಹೊಂದಿದ್ದಾರೆ. ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಶ್ರೀಗಳ ಪಾರ್ಥಿವ ಶರೀರವನ್ನು ಮಠಕ್ಕೆ ತರಲಾಗುತ್ತಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಅವರ ಶಿಷ್ಯರಾದ ಹೊಂಬುಜ ಮಠ, ಕನಕಗಿರಿ ಕ್ಷೇತ್ರ, ಸೋಂದಾ ಕ್ಷೇತ್ರ, ಕಂಬದಹಳ್ಳಿ ಕ್ಷೇತ್ರ, ತಮಿಳುನಾಡಿನ ಅರಹಂತಗಿರಿ, ಮೂಡುಬಿದಿರೆಯ ಜೈನ ಮಠ, ಕಾರ್ಕಳದ ಜೈನ ಮಠ ಪೀಠಾಧಿಪತಿಗಳು ಕ್ಷೇತ್ರಕ್ಕೆ ಬರಲಿದ್ದಾರೆ. ನಂತರ ಮುಂದಿನ ವಿಧಿವಿಧಾನಗಳ ಬಗ್ಗೆ ಶ್ರೀಗಳು ಚರ್ಚಿಸಲಿದ್ದು, ಅಂತಿಮ ವಿಧಿವಿಧಾನದ ಸಮಯ ನಿಗದಿಪಡಿಸಲಾಗುವುದು.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago