BREAKING NEWS

ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣ ದಂಡನೆ : ಶಶಿ ತರೂರ್ ಆತಂಕ

ಬೆಂಗಳೂರು : ನೌಕಾಪಡೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಎಂಟು ಭಾರತೀಯರಿಗೆ ಕತಾರ್ ಆಡಳಿತ ಮರಣದಂಡನೆ ವಿಧಿಸಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆತಂಕ ವ್ಯಕ್ತಪಡಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ನಿವೃತ್ತ ಅಧಿಕಾರಿಗಳನ್ನು ವಾಪಸ್ ಕರೆತರಲು ಕತಾರ್ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ತಕ್ಷಣ ಕಾರ್ಯನಿರ್ವಹಿಸುತ್ತಾರೆ ಎಂದು ತರೂರ್ ವಿಶ್ವಾಸ ವ್ಯಕ್ತಪಡಿಸಿದರು. ಜೊತೆಗೆ, ಇಡೀ ಪ್ರಕರಣದ ವಿವರಗಳು ನಿಗೂಢ ಮತ್ತು ಅಪಾರದರ್ಶಕತೆಯಿಂದ ಮುಚ್ಚಿಹೋಗಿವೆ ಎಂದು ಹೇಳಿದರು.

ಬಂಧನಕ್ಕೊಳಗಾಗಿರುವ ಎಂಟು ಮಂದಿ ನೌಕಾಪಡೆಯ ಮಾಜಿ ಯೋಧರು ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದು ಒಮಾನ್ ಏರ್ ಫೋರ್ಸ್ ಅಧಿಕಾರಿಯ ಖಾಸಗಿ ಸಂಸ್ಥೆಯಾಗಿದ್ದು, ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ಸೇರಿದಂತೆ ಹಲವು ಸೇವೆಗಳನ್ನು ಒದಗಿಸುತ್ತದೆ. ಎಂಟು ಭಾರತೀಯರ ಬಂಧನದ ನಂತರ, ಕಂಪನಿಯನ್ನು ಮುಚ್ಚಲಾಗಿದೆ.

ಕತಾರ್‌ನಲ್ಲಿ ಮರಣದಂಡನೆಗೆ ಒಳಗಾದ 8 ಭಾರತೀಯರಲ್ಲಿ ಏಳು ಮಂದಿ ಭಾರತೀಯ ನೌಕಾಪಡೆಯಲ್ಲಿ ಮಾಜಿ ಅಧಿಕಾರಿಗಳು. ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಪೂರ್ಣೇಂದು ತಿವಾರಿ ಅವರಿಗೆ ನಾಲ್ಕು ವರ್ಷಗಳ ಹಿಂದೆ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿಯನ್ನು ನೀಡಲಾಯಿತು. ಅನಿವಾಸಿ ಭಾರತೀಯ ಮೂಲದ ವ್ಯಕ್ತಿಗಳಿಗೆ ಇದು ಅತ್ಯುನ್ನತ ಗೌರವವಾಗಿದೆ. ಪೂರ್ಣೇಂದು ತಿವಾರಿ ಅವರು ಭಾರತೀಯ ಸಶಸ್ತ್ರ ಪಡೆಗಳಿಂದ ಇದನ್ನು ಪಡೆದ ಮೊದಲಿಗರಾಗಿದ್ದಾರೆ.

lokesh

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

2 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

11 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

16 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

20 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

25 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

27 mins ago