BREAKING NEWS

ಸಚಿವ ಸಂಪುಟ ಉಪಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ, ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮೋಡ ಬಿತ್ತನೆ ಇಂದಿನವರೆಗೂ ಎಲ್ಲಿಯೂ ಯಶಸ್ವಿಯಾಗಿಲ್ಲ. ಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರದವರಿಗೆ ತಿಳಿಸಲಾಗುವುದು. ಕೇಂದ್ರ ಸರ್ಕಾರದವರು ಪರಿಶೀಲಿಸಿದ ನಂತರ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ನೆರವು ನೀಡುತ್ತಾರೆ ಎಂದರು. ಬರಗಾಲ ಎಂದು ಘೋಷಣೆಯಾದ ನಂತರ ಆ ತಾಲ್ಲೂಕುಗಳಲ್ಲಿ ಬರ ಪರಿಹಾರವಾಗಿ ಜನರಿಗೆ ಕೆಲಸ, ಮುಂತಾದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದರು.

ಮೂರು ದಿನಗಳ ಪ್ರವಾಸ : ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದು, ಇಂದು ಕೆಡಿಪಿ ಸಭೆ ನಡೆಸಿದ್ದೇನೆ. ನಾಳೆ ಸುತ್ತೂರು ಮಠ ಹಾಗೂ ಸಿದ್ದಲಿಂಗಪುರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

ʼʼಒಂದು ಲಕ್ಷ ಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆʼʼ : ಕೆ.ಆರ್.ಆಸ್ಪತ್ರೆಯಲ್ಲಿ ಸುಟ್ಟಗಾಯಗಳಿಗೆ ಚಿಕಿತ್ಸೆ ನೀಡುವ ಬರ್ನ್ಸ್ ವಾರ್ಡ್ ಉದ್ಘಾಟನೆ ಇದೆ. ಆಗಸ್ಟ್ 30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 3 ಗ್ಯಾರಂಟಿ ಗಳನ್ನು ಕಾರಿ ಮಾಡಿದ್ದು, ನಾಲ್ಕನೇ ಗ್ಯಾರಂಟಿ ಯನ್ನು ಜಾರಿ ಮಾಡಲಿದ್ದೇವೆ ಎಂದರು. ಒಂದು ಲಕ್ಷ ಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ಇದ್ದು, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಆಗಮಿಸಲಿದ್ದಾರೆ. ಖರ್ಗೆಯವರು ಉದ್ಘಾಟಿಸಿ, ನನ್ನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ ಎಂದರು.

ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ನಾಲ್ಕು ಜಿಲ್ಲೆಗಳು ಸೇರಿ ಕಾರ್ಯಕ್ರಮ ಆಯೋಜಿಸಿದೆ. ಎಲ್ಲಾ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.

ʼʼಗೃಹಲಕ್ಷ್ಮಿ ದೇಶದಲ್ಲಿಯೇ ದೊಡ್ಡ ಕಾರ್ಯಕ್ರಮʼʼ : ದೇಶದಲ್ಲಿಯೇ ಇದು ದೊಡ್ಡ ಕಾರ್ಯಕ್ರಮ. ವರ್ಷದಲ್ಲಿ ಸುಮಾರು 32,ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಈ ವರ್ಷ ಸುಮಾರು 18 ಸಾವಿರ ಕೋಟಿ ರೂ. ಗಳು ವೆಚ್ಚವಾಗಲಿದೆ. 1.33 ಕೋಟಿ ಲಕ್ಷ ಕುಟುಂಬಗಳ ಯಜಮಾನಿಗೆ 2000 ರೂ. ನೀಡಲಾಗುತ್ತಿದೆ.ಒಂದು ತಿಂಗಳಿಗೆ 4-5 ಸಾವಿರ ರೂ.ಗಳು ಒಂದು ಕುಟುಂಬ ಕ್ಕೆ ದೊರೆಯಲಿದೆ. ಇದರಿಂದ ಅವರ ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚುತ್ತದೆ. ಅವರ ಕೈಯಲ್ಲಿ ದುಡ್ಡು ಇರುವುದರಿಂದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಎಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಿರುತ್ತದೆಯೋ ಅಲ್ಲಿ ಜಿಡಿಪಿ ಕೂಡ ಬೆಳವಣಿಗೆ ಆಗುತ್ತದೆ ವರ್ಷಕ್ಕೆ ಉದ್ಯೋಗ ಸೃಷ್ಟಿಯೂ ಆಗುತ್ತದೆ ಎಂದರು.

ಬೆಳಗಾವಿಯಿಂದ ಕಾರ್ಯಕ್ರಮ ಮೈಸೂರಿಗೆ ಸ್ಥಳಾಂತರ ವಾಗಿರುವ ಪ್ರತಿಕ್ರಿಯೆ ನೀಡಿ ಎಲ್ಲಾ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ಜಾರಿಯಾಗಲಿದೆ. ಬೆಳಗಾವಿಗೆ ಬದಲಾಗಿ ಮೈಸೂರಿನಲ್ಲಿ ಏರ್ಪಾಡಾಗಿದೆ ಎಂದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago