ನವದೆಹಲಿ : ಮಾಜಿ ಸಚಿವ ಪ್ರಭು ಚೌಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದ್ದು, ಅವರ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ. ತನ್ನನ್ನು ಹತ್ಯೆ ಮಾಡಿ ಉಪ ಚುನಾವಣೆ ನಡೆಸುವ ಬಗ್ಗೆ ಖೂಬಾ ಸಂಚು ರೂಪಿಸಿದ್ದಾರೆ ಎಂದು ಪ್ರಭು ಚೌಹಾಣ್ ಆರೋಪಿಸಿದ್ದರು.
ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಭಗವಂತ ಖೂಬಾ, ಮಂಡಲದ ಕಾರ್ಯಕಾರಣಿಯಲ್ಲಿ ಮಾತನಾಡುವ ಎಲ್ಲ ಮಾತು ಬಿಟ್ಟು ನನ್ನ ಮೇಲೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ. ಇದರಿಂದ ಆಘಾತನಾಗಿದ್ದೇನೆ. ಹೇಳಿಕೊಳ್ಳಲಾಗದಷ್ಡು ಮನಸ್ಸಿಗೆ ನೋವಾಗಿದೆ. ನನ್ನ ಕುಟುಂಬ ಕೂಡಾ ವಿಚಲಿತವಾಗಿದೆ. ಪಕ್ಷದ ಕಾರ್ಯಕರ್ತರು, ಹಿತೈಶಿಗಳು ನಿರಂತರವಾಗಿ ಸಂಪರ್ಕ ಮಾಡಿ ಧೈರ್ಯ ತುಂಬುತ್ತಿದ್ದಾರೆ ಎಂದರು.
ಪ್ರಭು ಚೌಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದೆ. ಒಂಭತ್ತು ವರ್ಷದ ಹಿಂದೆ ಇದೇ ರೀತಿ ಆರೋಪ ಮಾಡಿದ್ದರು. ನಮ್ಮ ಪಕ್ಷದಲ್ಲಿ ಈ ಎಲ್ಲ ಸಮಸ್ಯೆ ಬಗೆಹರಿಯುತ್ತವೆ. ತಪ್ಪು ತಿಳುವಳಿಕೆ ಸರಿಯಾಗಬಹುದು ಎಂದು ಭಾವಿಸಿದ್ದೆ. ಆದರೆ ಇದರ ಹಿಂದೆ ತಂತ್ರ ಕುತಂತ್ರ ಮೋಸ ಕಪಟದಿಂದ ಕೂಡಿದೆ ಎಂದು ಅರ್ಥವಾಗಿದೆ ಎಂದರು.
ಪಕ್ಷದ ಸೇವೆ ನೋಡಿ ಮೋದಿ ಅವರು ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿದ್ದಾರೆ. ಮಂತ್ರಿ ಮಾಡುವ ಮುನ್ನ ನನ್ನ ಚರಿತ್ರೆ ಗಮನ ಹರಿಸುತ್ತಾರೆ. ನಾನು ಜನ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಆದರೆ ಈ ಆರೋಪ ಯಾಕೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಜಿಲ್ಲೆಯಲ್ಲಿ ಶಾಸಕರ ಸಂಖ್ಯೆಯನ್ನು ಒಂದರಿಂದ ನಾಲ್ಕಕ್ಕೆ ಹೆಚ್ಚಿಸಿದೆ. ಇಂತಹ ಸಮಯದಲ್ಲಿ ಪ್ರಭು ಚೌಹಾಣ್ ಎಲ್ಲರ ಜೊತೆಗೆ ಸಂಭ್ರಮ ಮಾಡಬೇಕಿತ್ತು. ಆದರೆ ದೋಷಣೆ ಮಾಡುತ್ತಿದ್ದಾರೆ ಎಂದರು.
ಇದು ಚೌಹಾಣ್ ಅವರ ತಂತ್ರ ಕುತಂತ್ರದ ಆಟ. ಎಲ್ಲ ಆದರೂ ಮಾಧ್ಯಮಕ್ಕೆ ಹೋಗಿಲ್ಲ. ನಮ್ಮ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ನನ್ನ ಭಾವನೆ ಹೇಳಿಕೊಂಡಿದ್ದೇನೆ. ಪಕ್ಷದ ವೇದಿಕೆಯಲ್ಲಿ ಸತ್ಯಾಸತ್ಯತೆಯನ್ನು ವರಿಷ್ಠರ ಹೊರ ಹಾಕಲಿದ್ದಾರೆ. ನೂರು ಕೋಟಿ ಮಾನ ಹಾನಿ ಕೇಸ್ ಹಾಕಲು ನಿರ್ಧರಿಸಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ದೂರು ದಾಖಲಿಸುತ್ತೇನೆ ಎಂದರು.
ಪ್ರಭು ಚೌಹಾಣ್ ಅವರ ಆರೋಪಕ್ಕೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆರೋಪದ ಬಗ್ಗೆ ಸತ್ಯಾಸತ್ಯೆತೆ ಪರಿಶೀಲಿಸಲಾಗುವುದು. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…