BREAKING NEWS

ಪ್ರಭು ಚೌಹಾಣ್ ವಿರುದ್ಧ 100 ಕೋಟಿ ಮಾನನಷ್ಟ ಪ್ರಕರಣ ದಾಖಲಿಸಲು ನಿರ್ಧಾರ: ಭಗವಂತ ಖೂಬಾ

ನವದೆಹಲಿ : ಮಾಜಿ ಸಚಿವ ಪ್ರಭು ಚೌಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದ್ದು, ಅವರ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ. ತನ್ನನ್ನು ಹತ್ಯೆ ಮಾಡಿ ಉಪ ಚುನಾವಣೆ ನಡೆಸುವ ಬಗ್ಗೆ ಖೂಬಾ ಸಂಚು ರೂಪಿಸಿದ್ದಾರೆ ಎಂದು ಪ್ರಭು ಚೌಹಾಣ್ ಆರೋಪಿಸಿದ್ದರು.

ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಭಗವಂತ ಖೂಬಾ, ಮಂಡಲದ ಕಾರ್ಯಕಾರಣಿಯಲ್ಲಿ ಮಾತನಾಡುವ ಎಲ್ಲ ಮಾತು ಬಿಟ್ಟು ನನ್ನ ಮೇಲೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ. ಇದರಿಂದ ಆಘಾತನಾಗಿದ್ದೇನೆ. ಹೇಳಿಕೊಳ್ಳಲಾಗದಷ್ಡು ಮನಸ್ಸಿಗೆ ನೋವಾಗಿದೆ. ನನ್ನ ಕುಟುಂಬ ಕೂಡಾ ವಿಚಲಿತವಾಗಿದೆ. ಪಕ್ಷದ ಕಾರ್ಯಕರ್ತರು, ಹಿತೈಶಿಗಳು ನಿರಂತರವಾಗಿ ಸಂಪರ್ಕ ಮಾಡಿ ಧೈರ್ಯ ತುಂಬುತ್ತಿದ್ದಾರೆ ಎಂದರು.

ಪ್ರಭು ಚೌಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದೆ. ಒಂಭತ್ತು ವರ್ಷದ ಹಿಂದೆ ಇದೇ ರೀತಿ ಆರೋಪ ಮಾಡಿದ್ದರು. ನಮ್ಮ ಪಕ್ಷದಲ್ಲಿ ಈ ಎಲ್ಲ ಸಮಸ್ಯೆ ಬಗೆಹರಿಯುತ್ತವೆ. ತಪ್ಪು ತಿಳುವಳಿಕೆ ಸರಿಯಾಗಬಹುದು ಎಂದು ಭಾವಿಸಿದ್ದೆ. ಆದರೆ ಇದರ ಹಿಂದೆ ತಂತ್ರ ಕುತಂತ್ರ ಮೋಸ ಕಪಟದಿಂದ‌ ಕೂಡಿದೆ ಎಂದು ಅರ್ಥವಾಗಿದೆ ಎಂದರು.

ಪಕ್ಷದ ಸೇವೆ ನೋಡಿ ಮೋದಿ ಅವರು ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿದ್ದಾರೆ. ಮಂತ್ರಿ ಮಾಡುವ ಮುನ್ನ ನನ್ನ ಚರಿತ್ರೆ ಗಮನ ಹರಿಸುತ್ತಾರೆ. ನಾನು ಜನ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಆದರೆ ಈ ಆರೋಪ ಯಾಕೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಜಿಲ್ಲೆಯಲ್ಲಿ ಶಾಸಕರ ಸಂಖ್ಯೆಯನ್ನು ಒಂದರಿಂದ ನಾಲ್ಕಕ್ಕೆ ಹೆಚ್ಚಿಸಿದೆ. ಇಂತಹ ಸಮಯದಲ್ಲಿ ಪ್ರಭು ಚೌಹಾಣ್ ಎಲ್ಲರ ಜೊತೆಗೆ ಸಂಭ್ರಮ‌ ಮಾಡಬೇಕಿತ್ತು. ಆದರೆ ದೋಷಣೆ ಮಾಡುತ್ತಿದ್ದಾರೆ ಎಂದರು.

ಇದು ಚೌಹಾಣ್ ಅವರ ತಂತ್ರ ಕುತಂತ್ರದ ಆಟ. ಎಲ್ಲ ಆದರೂ ಮಾಧ್ಯಮಕ್ಕೆ ಹೋಗಿಲ್ಲ. ನಮ್ಮ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ನನ್ನ ಭಾವನೆ ಹೇಳಿಕೊಂಡಿದ್ದೇನೆ. ಪಕ್ಷದ ವೇದಿಕೆಯಲ್ಲಿ ಸತ್ಯಾಸತ್ಯತೆಯನ್ನು ವರಿಷ್ಠರ ಹೊರ ಹಾಕಲಿದ್ದಾರೆ. ನೂರು ಕೋಟಿ ಮಾನ ಹಾನಿ ಕೇಸ್ ಹಾಕಲು ನಿರ್ಧರಿಸಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ದೂರು ದಾಖಲಿಸುತ್ತೇನೆ ಎಂದರು.

ಪ್ರಭು ಚೌಹಾಣ್ ಅವರ ಆರೋಪಕ್ಕೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆರೋಪದ ಬಗ್ಗೆ ಸತ್ಯಾಸತ್ಯೆತೆ ಪರಿಶೀಲಿಸಲಾಗುವುದು. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದರು.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago