BREAKING NEWS

ಪ್ರಭು ಚೌಹಾಣ್ ವಿರುದ್ಧ 100 ಕೋಟಿ ಮಾನನಷ್ಟ ಪ್ರಕರಣ ದಾಖಲಿಸಲು ನಿರ್ಧಾರ: ಭಗವಂತ ಖೂಬಾ

ನವದೆಹಲಿ : ಮಾಜಿ ಸಚಿವ ಪ್ರಭು ಚೌಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದ್ದು, ಅವರ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ. ತನ್ನನ್ನು ಹತ್ಯೆ ಮಾಡಿ ಉಪ ಚುನಾವಣೆ ನಡೆಸುವ ಬಗ್ಗೆ ಖೂಬಾ ಸಂಚು ರೂಪಿಸಿದ್ದಾರೆ ಎಂದು ಪ್ರಭು ಚೌಹಾಣ್ ಆರೋಪಿಸಿದ್ದರು.

ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಭಗವಂತ ಖೂಬಾ, ಮಂಡಲದ ಕಾರ್ಯಕಾರಣಿಯಲ್ಲಿ ಮಾತನಾಡುವ ಎಲ್ಲ ಮಾತು ಬಿಟ್ಟು ನನ್ನ ಮೇಲೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ. ಇದರಿಂದ ಆಘಾತನಾಗಿದ್ದೇನೆ. ಹೇಳಿಕೊಳ್ಳಲಾಗದಷ್ಡು ಮನಸ್ಸಿಗೆ ನೋವಾಗಿದೆ. ನನ್ನ ಕುಟುಂಬ ಕೂಡಾ ವಿಚಲಿತವಾಗಿದೆ. ಪಕ್ಷದ ಕಾರ್ಯಕರ್ತರು, ಹಿತೈಶಿಗಳು ನಿರಂತರವಾಗಿ ಸಂಪರ್ಕ ಮಾಡಿ ಧೈರ್ಯ ತುಂಬುತ್ತಿದ್ದಾರೆ ಎಂದರು.

ಪ್ರಭು ಚೌಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದೆ. ಒಂಭತ್ತು ವರ್ಷದ ಹಿಂದೆ ಇದೇ ರೀತಿ ಆರೋಪ ಮಾಡಿದ್ದರು. ನಮ್ಮ ಪಕ್ಷದಲ್ಲಿ ಈ ಎಲ್ಲ ಸಮಸ್ಯೆ ಬಗೆಹರಿಯುತ್ತವೆ. ತಪ್ಪು ತಿಳುವಳಿಕೆ ಸರಿಯಾಗಬಹುದು ಎಂದು ಭಾವಿಸಿದ್ದೆ. ಆದರೆ ಇದರ ಹಿಂದೆ ತಂತ್ರ ಕುತಂತ್ರ ಮೋಸ ಕಪಟದಿಂದ‌ ಕೂಡಿದೆ ಎಂದು ಅರ್ಥವಾಗಿದೆ ಎಂದರು.

ಪಕ್ಷದ ಸೇವೆ ನೋಡಿ ಮೋದಿ ಅವರು ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿದ್ದಾರೆ. ಮಂತ್ರಿ ಮಾಡುವ ಮುನ್ನ ನನ್ನ ಚರಿತ್ರೆ ಗಮನ ಹರಿಸುತ್ತಾರೆ. ನಾನು ಜನ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಆದರೆ ಈ ಆರೋಪ ಯಾಕೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಜಿಲ್ಲೆಯಲ್ಲಿ ಶಾಸಕರ ಸಂಖ್ಯೆಯನ್ನು ಒಂದರಿಂದ ನಾಲ್ಕಕ್ಕೆ ಹೆಚ್ಚಿಸಿದೆ. ಇಂತಹ ಸಮಯದಲ್ಲಿ ಪ್ರಭು ಚೌಹಾಣ್ ಎಲ್ಲರ ಜೊತೆಗೆ ಸಂಭ್ರಮ‌ ಮಾಡಬೇಕಿತ್ತು. ಆದರೆ ದೋಷಣೆ ಮಾಡುತ್ತಿದ್ದಾರೆ ಎಂದರು.

ಇದು ಚೌಹಾಣ್ ಅವರ ತಂತ್ರ ಕುತಂತ್ರದ ಆಟ. ಎಲ್ಲ ಆದರೂ ಮಾಧ್ಯಮಕ್ಕೆ ಹೋಗಿಲ್ಲ. ನಮ್ಮ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ನನ್ನ ಭಾವನೆ ಹೇಳಿಕೊಂಡಿದ್ದೇನೆ. ಪಕ್ಷದ ವೇದಿಕೆಯಲ್ಲಿ ಸತ್ಯಾಸತ್ಯತೆಯನ್ನು ವರಿಷ್ಠರ ಹೊರ ಹಾಕಲಿದ್ದಾರೆ. ನೂರು ಕೋಟಿ ಮಾನ ಹಾನಿ ಕೇಸ್ ಹಾಕಲು ನಿರ್ಧರಿಸಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ದೂರು ದಾಖಲಿಸುತ್ತೇನೆ ಎಂದರು.

ಪ್ರಭು ಚೌಹಾಣ್ ಅವರ ಆರೋಪಕ್ಕೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆರೋಪದ ಬಗ್ಗೆ ಸತ್ಯಾಸತ್ಯೆತೆ ಪರಿಶೀಲಿಸಲಾಗುವುದು. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago