ನವದೆಹಲಿ : ಹಿಮಾಚಲ ಪ್ರದೇಶ ಸರಕಾರ ಭಾರೀ ಮಳೆಯಿಂದ ಉಂಟಾದ ಗರಿಷ್ಠ ಪ್ರಮಾಣದ ಹಾನಿಯನ್ನು ರಾಜ್ಯ ವಿಪತ್ತು ಎಂದು ಘೋಷಿಸಿದ್ದು, ಕೇಂದ್ರ ಸರಕಾರವು ಇದನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಶುಕ್ರವಾರ ಆಗ್ರಹಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದೆ. ಆದಾಗ್ಯೂ, ಹಿಮಾಚಲ ಪ್ರದೇಶದ ವಿಪತ್ತನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರದ ಪ್ರತಿಕ್ರಿಯೆಗಾಗಿ ರಾಜ್ಯವು ಕಾಯುತ್ತಿದೆ.
ರವಿವಾರದಿಂದ ಹಿಮಾಚಲ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿಮ್ಲಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ.
ಪಿಟಿಐ ಜೊತೆ ಮಾತನಾಡಿದ ಸುಖವಿಂದರ್ ಸಿಂಗ್ ಸುಖು, “ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿವೆ ಹಾಗೂ ರಾಜ್ಯ ಸರಕಾರವು ಸಂತ್ರಸ್ತ ಕುಟುಂಬಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದೆ, ವಿಶೇಷವಾಗಿ ಪ್ರವಾಹ ಮತ್ತು ಭೂಕುಸಿತದಿಂದ ಮನೆ ಹಾನಿಗೊಳಗಾದವರಿಗೆ ಸ್ವಂತ ಸಂಪನ್ಮೂಲದಿಂದ ಸಹಾಯ ಮಾಡಲು ಪ್ರಯತ್ನಿಸುತ್ತಿದೆ” ಎಂದರು.
“ಕೇಂದ್ರ ತಂಡಗಳು ಹಾನಿಯ ಮೌಲ್ಯಮಾಪನಕ್ಕಾಗಿ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿವೆ ಹಾಗೂ ನಮಗೆ ಕೇಂದ್ರದಿಂದ ಸಮಯೋಚಿತ ಸಹಾಯ ಬೇಕು. ರಾಜ್ಯವು ಅಂದಾಜು 10,000 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದೆ” ಎಂದು ಸುಖು ಹೇಳಿದರು.
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…