BREAKING NEWS

ಹಿಮಾಚಲ ಪ್ರದೇಶದ ವಿಪತ್ತನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಿ: ಕೇಂದ್ರಕ್ಕೆ ಹಿಮಾಚಲ ಸಿಎಂ ಮನವಿ

ನವದೆಹಲಿ : ಹಿಮಾಚಲ ಪ್ರದೇಶ ಸರಕಾರ ಭಾರೀ ಮಳೆಯಿಂದ ಉಂಟಾದ ಗರಿಷ್ಠ ಪ್ರಮಾಣದ ಹಾನಿಯನ್ನು ರಾಜ್ಯ ವಿಪತ್ತು ಎಂದು ಘೋಷಿಸಿದ್ದು, ಕೇಂದ್ರ ಸರಕಾರವು ಇದನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಶುಕ್ರವಾರ ಆಗ್ರಹಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದೆ. ಆದಾಗ್ಯೂ, ಹಿಮಾಚಲ ಪ್ರದೇಶದ ವಿಪತ್ತನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರದ ಪ್ರತಿಕ್ರಿಯೆಗಾಗಿ ರಾಜ್ಯವು ಕಾಯುತ್ತಿದೆ.

ರವಿವಾರದಿಂದ ಹಿಮಾಚಲ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿಮ್ಲಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ.

ಪಿಟಿಐ ಜೊತೆ ಮಾತನಾಡಿದ ಸುಖವಿಂದರ್ ಸಿಂಗ್ ಸುಖು, “ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿವೆ ಹಾಗೂ ರಾಜ್ಯ ಸರಕಾರವು ಸಂತ್ರಸ್ತ ಕುಟುಂಬಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದೆ, ವಿಶೇಷವಾಗಿ ಪ್ರವಾಹ ಮತ್ತು ಭೂಕುಸಿತದಿಂದ ಮನೆ ಹಾನಿಗೊಳಗಾದವರಿಗೆ ಸ್ವಂತ ಸಂಪನ್ಮೂಲದಿಂದ ಸಹಾಯ ಮಾಡಲು ಪ್ರಯತ್ನಿಸುತ್ತಿದೆ” ಎಂದರು.

“ಕೇಂದ್ರ ತಂಡಗಳು ಹಾನಿಯ ಮೌಲ್ಯಮಾಪನಕ್ಕಾಗಿ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿವೆ ಹಾಗೂ ನಮಗೆ ಕೇಂದ್ರದಿಂದ ಸಮಯೋಚಿತ ಸಹಾಯ ಬೇಕು. ರಾಜ್ಯವು ಅಂದಾಜು 10,000 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದೆ” ಎಂದು ಸುಖು ಹೇಳಿದರು.

andolanait

Recent Posts

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

15 mins ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

3 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

8 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

11 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

11 hours ago