ನವದೆಹಲಿ : ಹಿಮಾಚಲ ಪ್ರದೇಶ ಸರಕಾರ ಭಾರೀ ಮಳೆಯಿಂದ ಉಂಟಾದ ಗರಿಷ್ಠ ಪ್ರಮಾಣದ ಹಾನಿಯನ್ನು ರಾಜ್ಯ ವಿಪತ್ತು ಎಂದು ಘೋಷಿಸಿದ್ದು, ಕೇಂದ್ರ ಸರಕಾರವು ಇದನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಶುಕ್ರವಾರ ಆಗ್ರಹಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದೆ. ಆದಾಗ್ಯೂ, ಹಿಮಾಚಲ ಪ್ರದೇಶದ ವಿಪತ್ತನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರದ ಪ್ರತಿಕ್ರಿಯೆಗಾಗಿ ರಾಜ್ಯವು ಕಾಯುತ್ತಿದೆ.
ರವಿವಾರದಿಂದ ಹಿಮಾಚಲ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿಮ್ಲಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ.
ಪಿಟಿಐ ಜೊತೆ ಮಾತನಾಡಿದ ಸುಖವಿಂದರ್ ಸಿಂಗ್ ಸುಖು, “ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿವೆ ಹಾಗೂ ರಾಜ್ಯ ಸರಕಾರವು ಸಂತ್ರಸ್ತ ಕುಟುಂಬಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದೆ, ವಿಶೇಷವಾಗಿ ಪ್ರವಾಹ ಮತ್ತು ಭೂಕುಸಿತದಿಂದ ಮನೆ ಹಾನಿಗೊಳಗಾದವರಿಗೆ ಸ್ವಂತ ಸಂಪನ್ಮೂಲದಿಂದ ಸಹಾಯ ಮಾಡಲು ಪ್ರಯತ್ನಿಸುತ್ತಿದೆ” ಎಂದರು.
“ಕೇಂದ್ರ ತಂಡಗಳು ಹಾನಿಯ ಮೌಲ್ಯಮಾಪನಕ್ಕಾಗಿ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿವೆ ಹಾಗೂ ನಮಗೆ ಕೇಂದ್ರದಿಂದ ಸಮಯೋಚಿತ ಸಹಾಯ ಬೇಕು. ರಾಜ್ಯವು ಅಂದಾಜು 10,000 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದೆ” ಎಂದು ಸುಖು ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…