BREAKING NEWS

ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ : ಸ್ವಾಮಿ ಚಕ್ರಪಾಣಿ ಮಹಾರಾಜ್

ಲಕ್ನೋ : ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ, ಭಯೋತ್ಪಾದಕರು ಅಲ್ಲಿಗೆ ತಲುಪದಂತೆ ನೋಡಿಕೊಳ್ಳಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಸಂಸತ್ತಿನಲ್ಲಿ ಘೋಷಿಸಬೇಕು. ಚಂದ್ರಯಾನ-3 ಇಳಿದಿರುವ ಶಿವಶಕ್ತಿ ಪಾಯಿಂಟ್‍ನ್ನು ಅದರ ರಾಜಧಾನಿಯಾಗಿ ಅಭಿವೃದ್ಧಿಪಡಿಸಬೇಕು. ಆದ್ದರಿಂದ ಯಾವುದೇ ಭಯೋತ್ಪಾದಕ ಜಿಹಾದಿ ಮನಸ್ಥಿತಿಗಳು ಅಲ್ಲಿಗೆ ತಲುಪಬಾರದು ಎಂದಿದ್ದಾರೆ.

ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ ಜಾಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿವಶಕ್ತಿ ಎಂದು ಹೆಸರಿಟ್ಟಿದ್ದರು. ಅಲ್ಲದೇ ಚಂದ್ರಯಾನ-2 ಪತನಗೊಂಡ ಜಾಗಕ್ಕೆ ತಿರಂಗ ಎಂದು ಹೆಸರಿಟ್ಟಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕ ರಶಿದ್ ಅಲ್ವಿ ಮೋದಿ ಹೆಸರಿಟ್ಟಿರುವುದನ್ನು ವ್ಯಂಗ್ಯ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕ ಶೆಹಜಾದ್ ಪೂನವಾಲ ತಿರುಗೇಟು ನೀಡಿ ಕಾಂಗ್ರೆಸ್ ಹಿಂದೂ ವಿರೋಧಿ ತನವನ್ನು ಪ್ರದರ್ಶಿಸುತ್ತಿದೆ ಎಂದಿದ್ದರು.

ಇದಾದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಈ ಹೆಸರಿನ ಬಗ್ಗೆ ವಿವಾದದ ಅಗತ್ಯವಿಲ್ಲ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ ಹಾಗೂ ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮದ ಅಗತ್ಯವಿದೆ ಎಂದಿದ್ದರು.

lokesh

Recent Posts

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

39 mins ago

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

1 hour ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

2 hours ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

2 hours ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

3 hours ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

3 hours ago