ಲಕ್ನೋ : ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ, ಭಯೋತ್ಪಾದಕರು ಅಲ್ಲಿಗೆ ತಲುಪದಂತೆ ನೋಡಿಕೊಳ್ಳಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಸಂಸತ್ತಿನಲ್ಲಿ ಘೋಷಿಸಬೇಕು. ಚಂದ್ರಯಾನ-3 ಇಳಿದಿರುವ ಶಿವಶಕ್ತಿ ಪಾಯಿಂಟ್ನ್ನು ಅದರ ರಾಜಧಾನಿಯಾಗಿ ಅಭಿವೃದ್ಧಿಪಡಿಸಬೇಕು. ಆದ್ದರಿಂದ ಯಾವುದೇ ಭಯೋತ್ಪಾದಕ ಜಿಹಾದಿ ಮನಸ್ಥಿತಿಗಳು ಅಲ್ಲಿಗೆ ತಲುಪಬಾರದು ಎಂದಿದ್ದಾರೆ.
ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ ಜಾಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿವಶಕ್ತಿ ಎಂದು ಹೆಸರಿಟ್ಟಿದ್ದರು. ಅಲ್ಲದೇ ಚಂದ್ರಯಾನ-2 ಪತನಗೊಂಡ ಜಾಗಕ್ಕೆ ತಿರಂಗ ಎಂದು ಹೆಸರಿಟ್ಟಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕ ರಶಿದ್ ಅಲ್ವಿ ಮೋದಿ ಹೆಸರಿಟ್ಟಿರುವುದನ್ನು ವ್ಯಂಗ್ಯ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕ ಶೆಹಜಾದ್ ಪೂನವಾಲ ತಿರುಗೇಟು ನೀಡಿ ಕಾಂಗ್ರೆಸ್ ಹಿಂದೂ ವಿರೋಧಿ ತನವನ್ನು ಪ್ರದರ್ಶಿಸುತ್ತಿದೆ ಎಂದಿದ್ದರು.
ಇದಾದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಈ ಹೆಸರಿನ ಬಗ್ಗೆ ವಿವಾದದ ಅಗತ್ಯವಿಲ್ಲ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ ಹಾಗೂ ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮದ ಅಗತ್ಯವಿದೆ ಎಂದಿದ್ದರು.
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…