BREAKING NEWS

ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ : ಸ್ವಾಮಿ ಚಕ್ರಪಾಣಿ ಮಹಾರಾಜ್

ಲಕ್ನೋ : ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ, ಭಯೋತ್ಪಾದಕರು ಅಲ್ಲಿಗೆ ತಲುಪದಂತೆ ನೋಡಿಕೊಳ್ಳಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಸಂಸತ್ತಿನಲ್ಲಿ ಘೋಷಿಸಬೇಕು. ಚಂದ್ರಯಾನ-3 ಇಳಿದಿರುವ ಶಿವಶಕ್ತಿ ಪಾಯಿಂಟ್‍ನ್ನು ಅದರ ರಾಜಧಾನಿಯಾಗಿ ಅಭಿವೃದ್ಧಿಪಡಿಸಬೇಕು. ಆದ್ದರಿಂದ ಯಾವುದೇ ಭಯೋತ್ಪಾದಕ ಜಿಹಾದಿ ಮನಸ್ಥಿತಿಗಳು ಅಲ್ಲಿಗೆ ತಲುಪಬಾರದು ಎಂದಿದ್ದಾರೆ.

ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ ಜಾಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿವಶಕ್ತಿ ಎಂದು ಹೆಸರಿಟ್ಟಿದ್ದರು. ಅಲ್ಲದೇ ಚಂದ್ರಯಾನ-2 ಪತನಗೊಂಡ ಜಾಗಕ್ಕೆ ತಿರಂಗ ಎಂದು ಹೆಸರಿಟ್ಟಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕ ರಶಿದ್ ಅಲ್ವಿ ಮೋದಿ ಹೆಸರಿಟ್ಟಿರುವುದನ್ನು ವ್ಯಂಗ್ಯ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕ ಶೆಹಜಾದ್ ಪೂನವಾಲ ತಿರುಗೇಟು ನೀಡಿ ಕಾಂಗ್ರೆಸ್ ಹಿಂದೂ ವಿರೋಧಿ ತನವನ್ನು ಪ್ರದರ್ಶಿಸುತ್ತಿದೆ ಎಂದಿದ್ದರು.

ಇದಾದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಈ ಹೆಸರಿನ ಬಗ್ಗೆ ವಿವಾದದ ಅಗತ್ಯವಿಲ್ಲ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ ಹಾಗೂ ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮದ ಅಗತ್ಯವಿದೆ ಎಂದಿದ್ದರು.

lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago