ಕಲಬುರಗಿ : ಕೆಪಿಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಮೋದಿಗೆ ವಿಷ ಸರ್ಪ ಎಂದು ಹೇಳಿ ಅವಮಾನ ಮಾಡಿದ್ದಾರೆ. ಮೋದಿಯವರನ್ನು ಅವಮಾನ ಮಾಡುವುದು ಅಂದರೆ ಅದು ದೇಶಕ್ಕೆ ಅವಮಾನ ಮಾಡಿದಂತೆ. ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಖರ್ಗೆ ದೇಶಕ್ಕೇ ಅವಮಾನ ಮಾಡಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಈ ವಿಧಾನಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವಂತೆ ಮಾಡಿ, ಹೀನಾಯವಾಗಿ ಸೋಲಿಸಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರೆಕೊಟ್ಟರು.
ಚಿತ್ತಾಪುರ ಕ್ಷೇತ್ರ ವ್ಯಾಪ್ತಿಯ ವಾಡಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಪರ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ದೇಶಕ್ಕೆ ಅಪಮಾನ ಮಾಡಿದವರು ಅಧ್ಯಕ್ಷರಾಗಿರುವ ಕಾಂಗ್ರೆಸ್ ಈ ಚುನಾವಣೆಯಲ್ಲಿ ಗೆಲ್ಲಬೇಕಾ? ಆ ಪಕ್ಷದವರನ್ನು ಹೀನಾಯವಾಗಿ ಸೋಲಿಸುವ ಮೂಲಕ ದೇಶ ವಿರೋಧಿ ಮಾತು ಆಡುವವರಿಗೆ ತಕ್ಕ ಶಾಸ್ತಿ ಮಾಡಿ ಎಂದರು.
ಭಗವಾನ್ ರಾಮನ ಭೂಮಿ ಅಯೋಧ್ಯೆಯಿಂದ ಇಲ್ಲಿಗೆ ಬಂದಿದ್ದೇನೆ. ಭಗವಾನ್ ರಾಮನಿಗೆ ಆಂಜನೇಯ ಸಿಕ್ಕಿರುವುದು ಇದೇ ಕರ್ನಾಟಕದ ಭೂಮಿಯಲ್ಲಿ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿದೆ. ರಾಮನಿಗೆ ಸಂಕಟ ಬಂದಾಗ ಹನುಮ ಹೇಗಿದ್ದನೋ ಹಾಗೆಯೇ ದೇಶಕ್ಕೆ ಸಂಕಟ ಬಂದಾಗ ಪ್ರಧಾನಿ ಮೋದಿ ಹನುಮನ ರೀತಿ ರಕ್ಷಣೆಗೆ ಧಾವಿಸುತ್ತ ದೇಶದ ಜೊತೆಗಿದ್ದಾರೆ. ಇಂಥ ದೇಶಭಕ್ತನಿಗೆ ನಿಂದಿಸೋದು ಮಹಾ ಅಪರಾಧ ಎಂದರು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…