BREAKING NEWS

ಮೋದಿಗೆ ನಿಂದಿಸಿದ ಖರ್ಗೆ ಪುತ್ರನ ಠೇವಣಿ ಕಳೆಯಿರಿ : ಯೋಗಿ ಕರೆ

ಕಲಬುರಗಿ : ಕೆಪಿಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಮೋದಿಗೆ ವಿಷ ಸರ್ಪ ಎಂದು ಹೇಳಿ ಅವಮಾನ ಮಾಡಿದ್ದಾರೆ. ಮೋದಿಯವರನ್ನು ಅವಮಾನ ಮಾಡುವುದು ಅಂದರೆ ಅದು ದೇಶಕ್ಕೆ ಅವಮಾನ ಮಾಡಿದಂತೆ. ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಖರ್ಗೆ ದೇಶಕ್ಕೇ ಅವಮಾನ ಮಾಡಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಈ ವಿಧಾನಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವಂತೆ ಮಾಡಿ, ಹೀನಾಯವಾಗಿ ಸೋಲಿಸಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕರೆಕೊಟ್ಟರು.

ಚಿತ್ತಾಪುರ ಕ್ಷೇತ್ರ ವ್ಯಾಪ್ತಿಯ ವಾಡಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ ಪರ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ದೇಶಕ್ಕೆ ಅಪಮಾನ ಮಾಡಿದವರು ಅಧ್ಯಕ್ಷರಾಗಿರುವ ಕಾಂಗ್ರೆಸ್‌ ಈ ಚುನಾವಣೆಯಲ್ಲಿ ಗೆಲ್ಲಬೇಕಾ? ಆ ಪಕ್ಷದವರನ್ನು ಹೀನಾಯವಾಗಿ ಸೋಲಿಸುವ ಮೂಲಕ ದೇಶ ವಿರೋಧಿ ಮಾತು ಆಡುವವರಿಗೆ ತಕ್ಕ ಶಾಸ್ತಿ ಮಾಡಿ ಎಂದರು.

ಭಗವಾನ್‌ ರಾಮನ ಭೂಮಿ ಅಯೋಧ್ಯೆಯಿಂದ ಇಲ್ಲಿಗೆ ಬಂದಿದ್ದೇನೆ. ಭಗವಾನ್‌ ರಾಮನಿಗೆ ಆಂಜನೇಯ ಸಿಕ್ಕಿರುವುದು ಇದೇ ಕರ್ನಾಟಕದ ಭೂಮಿಯಲ್ಲಿ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿದೆ. ರಾಮನಿಗೆ ಸಂಕಟ ಬಂದಾಗ ಹನುಮ ಹೇಗಿದ್ದನೋ ಹಾಗೆಯೇ ದೇಶಕ್ಕೆ ಸಂಕಟ ಬಂದಾಗ ಪ್ರಧಾನಿ ಮೋದಿ ಹನುಮನ ರೀತಿ ರಕ್ಷಣೆಗೆ ಧಾವಿಸುತ್ತ ದೇಶದ ಜೊತೆಗಿದ್ದಾರೆ. ಇಂಥ ದೇಶಭಕ್ತನಿಗೆ ನಿಂದಿಸೋದು ಮಹಾ ಅಪರಾಧ ಎಂದರು.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

51 seconds ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

29 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago