ಕಲಬುರಗಿ : ಕೆಪಿಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಮೋದಿಗೆ ವಿಷ ಸರ್ಪ ಎಂದು ಹೇಳಿ ಅವಮಾನ ಮಾಡಿದ್ದಾರೆ. ಮೋದಿಯವರನ್ನು ಅವಮಾನ ಮಾಡುವುದು ಅಂದರೆ ಅದು ದೇಶಕ್ಕೆ ಅವಮಾನ ಮಾಡಿದಂತೆ. ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಖರ್ಗೆ ದೇಶಕ್ಕೇ ಅವಮಾನ ಮಾಡಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಈ ವಿಧಾನಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವಂತೆ ಮಾಡಿ, ಹೀನಾಯವಾಗಿ ಸೋಲಿಸಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರೆಕೊಟ್ಟರು.
ಚಿತ್ತಾಪುರ ಕ್ಷೇತ್ರ ವ್ಯಾಪ್ತಿಯ ವಾಡಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಪರ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ದೇಶಕ್ಕೆ ಅಪಮಾನ ಮಾಡಿದವರು ಅಧ್ಯಕ್ಷರಾಗಿರುವ ಕಾಂಗ್ರೆಸ್ ಈ ಚುನಾವಣೆಯಲ್ಲಿ ಗೆಲ್ಲಬೇಕಾ? ಆ ಪಕ್ಷದವರನ್ನು ಹೀನಾಯವಾಗಿ ಸೋಲಿಸುವ ಮೂಲಕ ದೇಶ ವಿರೋಧಿ ಮಾತು ಆಡುವವರಿಗೆ ತಕ್ಕ ಶಾಸ್ತಿ ಮಾಡಿ ಎಂದರು.
ಭಗವಾನ್ ರಾಮನ ಭೂಮಿ ಅಯೋಧ್ಯೆಯಿಂದ ಇಲ್ಲಿಗೆ ಬಂದಿದ್ದೇನೆ. ಭಗವಾನ್ ರಾಮನಿಗೆ ಆಂಜನೇಯ ಸಿಕ್ಕಿರುವುದು ಇದೇ ಕರ್ನಾಟಕದ ಭೂಮಿಯಲ್ಲಿ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿದೆ. ರಾಮನಿಗೆ ಸಂಕಟ ಬಂದಾಗ ಹನುಮ ಹೇಗಿದ್ದನೋ ಹಾಗೆಯೇ ದೇಶಕ್ಕೆ ಸಂಕಟ ಬಂದಾಗ ಪ್ರಧಾನಿ ಮೋದಿ ಹನುಮನ ರೀತಿ ರಕ್ಷಣೆಗೆ ಧಾವಿಸುತ್ತ ದೇಶದ ಜೊತೆಗಿದ್ದಾರೆ. ಇಂಥ ದೇಶಭಕ್ತನಿಗೆ ನಿಂದಿಸೋದು ಮಹಾ ಅಪರಾಧ ಎಂದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…