BREAKING NEWS

ಮೋದಿಗೆ ನಿಂದಿಸಿದ ಖರ್ಗೆ ಪುತ್ರನ ಠೇವಣಿ ಕಳೆಯಿರಿ : ಯೋಗಿ ಕರೆ

ಕಲಬುರಗಿ : ಕೆಪಿಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಮೋದಿಗೆ ವಿಷ ಸರ್ಪ ಎಂದು ಹೇಳಿ ಅವಮಾನ ಮಾಡಿದ್ದಾರೆ. ಮೋದಿಯವರನ್ನು ಅವಮಾನ ಮಾಡುವುದು ಅಂದರೆ ಅದು ದೇಶಕ್ಕೆ ಅವಮಾನ ಮಾಡಿದಂತೆ. ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಖರ್ಗೆ ದೇಶಕ್ಕೇ ಅವಮಾನ ಮಾಡಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಈ ವಿಧಾನಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವಂತೆ ಮಾಡಿ, ಹೀನಾಯವಾಗಿ ಸೋಲಿಸಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕರೆಕೊಟ್ಟರು.

ಚಿತ್ತಾಪುರ ಕ್ಷೇತ್ರ ವ್ಯಾಪ್ತಿಯ ವಾಡಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ ಪರ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ದೇಶಕ್ಕೆ ಅಪಮಾನ ಮಾಡಿದವರು ಅಧ್ಯಕ್ಷರಾಗಿರುವ ಕಾಂಗ್ರೆಸ್‌ ಈ ಚುನಾವಣೆಯಲ್ಲಿ ಗೆಲ್ಲಬೇಕಾ? ಆ ಪಕ್ಷದವರನ್ನು ಹೀನಾಯವಾಗಿ ಸೋಲಿಸುವ ಮೂಲಕ ದೇಶ ವಿರೋಧಿ ಮಾತು ಆಡುವವರಿಗೆ ತಕ್ಕ ಶಾಸ್ತಿ ಮಾಡಿ ಎಂದರು.

ಭಗವಾನ್‌ ರಾಮನ ಭೂಮಿ ಅಯೋಧ್ಯೆಯಿಂದ ಇಲ್ಲಿಗೆ ಬಂದಿದ್ದೇನೆ. ಭಗವಾನ್‌ ರಾಮನಿಗೆ ಆಂಜನೇಯ ಸಿಕ್ಕಿರುವುದು ಇದೇ ಕರ್ನಾಟಕದ ಭೂಮಿಯಲ್ಲಿ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿದೆ. ರಾಮನಿಗೆ ಸಂಕಟ ಬಂದಾಗ ಹನುಮ ಹೇಗಿದ್ದನೋ ಹಾಗೆಯೇ ದೇಶಕ್ಕೆ ಸಂಕಟ ಬಂದಾಗ ಪ್ರಧಾನಿ ಮೋದಿ ಹನುಮನ ರೀತಿ ರಕ್ಷಣೆಗೆ ಧಾವಿಸುತ್ತ ದೇಶದ ಜೊತೆಗಿದ್ದಾರೆ. ಇಂಥ ದೇಶಭಕ್ತನಿಗೆ ನಿಂದಿಸೋದು ಮಹಾ ಅಪರಾಧ ಎಂದರು.

lokesh

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

3 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

3 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

12 hours ago