BREAKING NEWS

ಮೋದಿಗೆ ನಿಂದಿಸಿದ ಖರ್ಗೆ ಪುತ್ರನ ಠೇವಣಿ ಕಳೆಯಿರಿ : ಯೋಗಿ ಕರೆ

ಕಲಬುರಗಿ : ಕೆಪಿಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಮೋದಿಗೆ ವಿಷ ಸರ್ಪ ಎಂದು ಹೇಳಿ ಅವಮಾನ ಮಾಡಿದ್ದಾರೆ. ಮೋದಿಯವರನ್ನು ಅವಮಾನ ಮಾಡುವುದು ಅಂದರೆ ಅದು ದೇಶಕ್ಕೆ ಅವಮಾನ ಮಾಡಿದಂತೆ. ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಖರ್ಗೆ ದೇಶಕ್ಕೇ ಅವಮಾನ ಮಾಡಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಈ ವಿಧಾನಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವಂತೆ ಮಾಡಿ, ಹೀನಾಯವಾಗಿ ಸೋಲಿಸಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕರೆಕೊಟ್ಟರು.

ಚಿತ್ತಾಪುರ ಕ್ಷೇತ್ರ ವ್ಯಾಪ್ತಿಯ ವಾಡಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ ಪರ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ದೇಶಕ್ಕೆ ಅಪಮಾನ ಮಾಡಿದವರು ಅಧ್ಯಕ್ಷರಾಗಿರುವ ಕಾಂಗ್ರೆಸ್‌ ಈ ಚುನಾವಣೆಯಲ್ಲಿ ಗೆಲ್ಲಬೇಕಾ? ಆ ಪಕ್ಷದವರನ್ನು ಹೀನಾಯವಾಗಿ ಸೋಲಿಸುವ ಮೂಲಕ ದೇಶ ವಿರೋಧಿ ಮಾತು ಆಡುವವರಿಗೆ ತಕ್ಕ ಶಾಸ್ತಿ ಮಾಡಿ ಎಂದರು.

ಭಗವಾನ್‌ ರಾಮನ ಭೂಮಿ ಅಯೋಧ್ಯೆಯಿಂದ ಇಲ್ಲಿಗೆ ಬಂದಿದ್ದೇನೆ. ಭಗವಾನ್‌ ರಾಮನಿಗೆ ಆಂಜನೇಯ ಸಿಕ್ಕಿರುವುದು ಇದೇ ಕರ್ನಾಟಕದ ಭೂಮಿಯಲ್ಲಿ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿದೆ. ರಾಮನಿಗೆ ಸಂಕಟ ಬಂದಾಗ ಹನುಮ ಹೇಗಿದ್ದನೋ ಹಾಗೆಯೇ ದೇಶಕ್ಕೆ ಸಂಕಟ ಬಂದಾಗ ಪ್ರಧಾನಿ ಮೋದಿ ಹನುಮನ ರೀತಿ ರಕ್ಷಣೆಗೆ ಧಾವಿಸುತ್ತ ದೇಶದ ಜೊತೆಗಿದ್ದಾರೆ. ಇಂಥ ದೇಶಭಕ್ತನಿಗೆ ನಿಂದಿಸೋದು ಮಹಾ ಅಪರಾಧ ಎಂದರು.

lokesh

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

2 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

2 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

6 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

11 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

11 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

11 hours ago