ರಾಂಚಿ: ಮೋದಿ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ಜಾರ್ಖಂಡ್ ಹೈಕೋರ್ಟ್ ಮಂಗಳವಾರ ವಿನಾಯಿತಿ ನೀಡಿದೆ.
2019ರ ಏಪ್ರಿಲ್ ನಲ್ಲಿ ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ರಾಹುಲ್ ಪ್ರಶ್ನಿಸಿದ್ದರು. ಈ ಸಂಬಂಧ ಪ್ರದೀಪ್ ಮೋದಿ ಎಂಬುವವರು ದೂರು ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕೋರ್ಟ್ಗೆ ಖುದ್ದಾಗಿ ಹಾಜರಾಗಬೇಕು ಎಂದು ರಾಂಚಿ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶೀಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರಿ ವಿಚಾರಣೆ ನಡೆಸಿದ ನ್ಯಾ. ಎಸ್.ಕೆ.ದ್ವಿವೇದಿ ಅವರು, ರಾಹುಲ್ಗೆ ವಿನಾಯಿತಿ ನೀಡಿ ಆಗಸ್ಟ್ 16ಕ್ಕೆ ವಿಚಾರಣೆಯನ್ನು ಮುಂದೂಡಿದರು.
ರಾಹುಲ್ ಹೇಳಿಕೆ ವಿರುದ್ಧ ಗುಜರಾತ್ನ ಸೂರತ್(ಪಶ್ಚಿಮ) ಕ್ಷೇತ್ರದ ಶಾಸಕ ಪೂರ್ಣೇಶ್ ಗಾಂಧಿ ಕೂಡ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಹಾಗಾಗಿ, ಅವರು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್ನ್ಯೂಸ್ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…