ರಾಂಚಿ: ಮೋದಿ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ಜಾರ್ಖಂಡ್ ಹೈಕೋರ್ಟ್ ಮಂಗಳವಾರ ವಿನಾಯಿತಿ ನೀಡಿದೆ.
2019ರ ಏಪ್ರಿಲ್ ನಲ್ಲಿ ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ರಾಹುಲ್ ಪ್ರಶ್ನಿಸಿದ್ದರು. ಈ ಸಂಬಂಧ ಪ್ರದೀಪ್ ಮೋದಿ ಎಂಬುವವರು ದೂರು ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕೋರ್ಟ್ಗೆ ಖುದ್ದಾಗಿ ಹಾಜರಾಗಬೇಕು ಎಂದು ರಾಂಚಿ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶೀಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರಿ ವಿಚಾರಣೆ ನಡೆಸಿದ ನ್ಯಾ. ಎಸ್.ಕೆ.ದ್ವಿವೇದಿ ಅವರು, ರಾಹುಲ್ಗೆ ವಿನಾಯಿತಿ ನೀಡಿ ಆಗಸ್ಟ್ 16ಕ್ಕೆ ವಿಚಾರಣೆಯನ್ನು ಮುಂದೂಡಿದರು.
ರಾಹುಲ್ ಹೇಳಿಕೆ ವಿರುದ್ಧ ಗುಜರಾತ್ನ ಸೂರತ್(ಪಶ್ಚಿಮ) ಕ್ಷೇತ್ರದ ಶಾಸಕ ಪೂರ್ಣೇಶ್ ಗಾಂಧಿ ಕೂಡ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಹಾಗಾಗಿ, ಅವರು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…