BREAKING NEWS

ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಕೈಗೊಳ್ಳಲಾಗುವುದು: ಸಿಎಂ

ಬೆಂಗಳೂರು: ಹಿಂದಿನ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶಾಸಕರಾದ ಬಿ.ಆರ್ ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗವು ಇಂದು ಭೇಟಿಯಾದ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡಿದರು.

ಭೂ ಸುಧಾರಣಾ ಕಾಯ್ದೆ ಬಗ್ಗೆ ಚರ್ಚೆ ಆಗಿದ್ದು, ಮುಂದಿನ ಅಧಿವೇಶನ ದಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು. ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಇಂದು ಸದನದಲ್ಲಿ ಚರ್ಚೆ ನಡೆದಿದೆ. ರೈತರ ಸಮಸ್ಯೆ ಬಗ್ಗೆ ವಿಸ್ತ್ರುತ ಚರ್ಚೆ ಮಾಡಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು. ಬಜೆಟ್ ನಿಂದ ಹೊರಗುಳಿದಿರುವ ಕೆಲವು ವಿಚಾರಗಳ ಬಗ್ಗೆ ಚರ್ಚಿಸಬೇಕಿದ್ದು, ಸರ್ಕಾರ ಮಾರ್ಪಾಡು ಮಾಡಿರುವ ಎಪಿಎಂಸಿ ಕಾಯ್ದೆಯ ಬಗ್ಗೆಯೂ ಚರ್ಚಿಸಬೇಕಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ತಿಳಿಸಿದರು.

ಹೊಸ ಸರ್ಕಾರ 5 ಗ್ಯಾರಂಟಿ ಗಳನ್ನು ಜಾರಿಗೆ ತಂದಿರುವುದು ಎಪಿಎಂಸಿ ಕಾಯ್ದೆ ಮಾರ್ಪಾಡು ಮಾಡಿರುವುದು ಸ್ವಾಗತಾರ್ಹ. ಕೆಲವು ವಿಚಾರಗಳ ಬಗ್ಗೆ  ಚರ್ಚೆ ಅಗತ್ಯವಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಾಪಸ್ಸು ಪಡೆಯಬೇಕು ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದು, ಆದಷ್ಟು ಬೇಗ ವಾಪಸ್ ಪಡೆಯಬೇಕು. ತಿದ್ದುಪಡಿ ಉಳುವವರ ಕೇಂದ್ರಿತವಾಗಿರಬೇಕು.

ಗೋಹತ್ಯೆ ಹತ್ಯೆ ನಿಷೇಧ ಕೂಡ ವಾಪಸ್ಸು ಪಡೆಯಬೇಕು. ಹಿಂದೆ ಕೃಷಿ ಬೆಲೆ ಆಯೋಗವನ್ನು ಘೋಷಣೆ ಮಾಡಲಾಗಿತ್ತು. ಅದಕ್ಕೆ ಶಾಸನಾತ್ಮಕ ರೂಪ ಕೊಟ್ಟು, ಆವರ್ತ ನಿಧಿ ನೀಡಬೇಕು. ಕೇಂದ್ರ ಸರ್ಕಾರ ಪಡಿತರ ವ್ಯವಸ್ಥೆಗೆ ಅಕ್ಕಿ ಕೊಡದೆ ರಾಜಕೀಯ ಮಾಡಿರುವುದನ್ನು ವಿರೋಧಿಸುತ್ತೇವೆ.  ಪೌಷ್ಟಿಕ ಆಹಾರ ನೀಡಲು ಪಡಿತರ ವ್ಯವಸ್ಥೆಗೆ ರೈತರೆ ಆಹಾರ ಧಾನ್ಯ ಕೊಡುವ ವ್ಯವಸ್ಥೆ ಮಾಡಬಹುದು. ಆಗ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ರೈತರು ಸಲಹೆ ನೀಡಿದರು. ಸರ್ಕಾರ ರೈತರ ಹಿತವನ್ನು ಕಾಪಾಡಬೇಕು ಎಂದು ರೈತರು  ಮನವಿ ಮಾಡಿದರು.

ಕೃಷಿ ಸಚಿವ ಚೆಲುವರಾಯಸ್ವಾಮಿ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ರೈತ ಮುಖಂಡರು ಸಭೆಯಲ್ಲಿ ಹಾಜರಿದ್ದರು.

andolanait

Recent Posts

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

13 mins ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

8 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

8 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

9 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

9 hours ago