ಬೆಂಗಳೂರು: ಹಿಂದಿನ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಭೂ ಸುಧಾರಣಾ ಕಾಯ್ದೆ ಬಗ್ಗೆ ಚರ್ಚೆ ಆಗಿದ್ದು, ಮುಂದಿನ ಅಧಿವೇಶನ ದಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು. ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಇಂದು ಸದನದಲ್ಲಿ ಚರ್ಚೆ ನಡೆದಿದೆ. ರೈತರ ಸಮಸ್ಯೆ ಬಗ್ಗೆ ವಿಸ್ತ್ರುತ ಚರ್ಚೆ ಮಾಡಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು. ಬಜೆಟ್ ನಿಂದ ಹೊರಗುಳಿದಿರುವ ಕೆಲವು ವಿಚಾರಗಳ ಬಗ್ಗೆ ಚರ್ಚಿಸಬೇಕಿದ್ದು, ಸರ್ಕಾರ ಮಾರ್ಪಾಡು ಮಾಡಿರುವ ಎಪಿಎಂಸಿ ಕಾಯ್ದೆಯ ಬಗ್ಗೆಯೂ ಚರ್ಚಿಸಬೇಕಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ತಿಳಿಸಿದರು.
ಹೊಸ ಸರ್ಕಾರ 5 ಗ್ಯಾರಂಟಿ ಗಳನ್ನು ಜಾರಿಗೆ ತಂದಿರುವುದು ಎಪಿಎಂಸಿ ಕಾಯ್ದೆ ಮಾರ್ಪಾಡು ಮಾಡಿರುವುದು ಸ್ವಾಗತಾರ್ಹ. ಕೆಲವು ವಿಚಾರಗಳ ಬಗ್ಗೆ ಚರ್ಚೆ ಅಗತ್ಯವಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಾಪಸ್ಸು ಪಡೆಯಬೇಕು ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದು, ಆದಷ್ಟು ಬೇಗ ವಾಪಸ್ ಪಡೆಯಬೇಕು. ತಿದ್ದುಪಡಿ ಉಳುವವರ ಕೇಂದ್ರಿತವಾಗಿರಬೇಕು.
ಗೋಹತ್ಯೆ ಹತ್ಯೆ ನಿಷೇಧ ಕೂಡ ವಾಪಸ್ಸು ಪಡೆಯಬೇಕು. ಹಿಂದೆ ಕೃಷಿ ಬೆಲೆ ಆಯೋಗವನ್ನು ಘೋಷಣೆ ಮಾಡಲಾಗಿತ್ತು. ಅದಕ್ಕೆ ಶಾಸನಾತ್ಮಕ ರೂಪ ಕೊಟ್ಟು, ಆವರ್ತ ನಿಧಿ ನೀಡಬೇಕು. ಕೇಂದ್ರ ಸರ್ಕಾರ ಪಡಿತರ ವ್ಯವಸ್ಥೆಗೆ ಅಕ್ಕಿ ಕೊಡದೆ ರಾಜಕೀಯ ಮಾಡಿರುವುದನ್ನು ವಿರೋಧಿಸುತ್ತೇವೆ. ಪೌಷ್ಟಿಕ ಆಹಾರ ನೀಡಲು ಪಡಿತರ ವ್ಯವಸ್ಥೆಗೆ ರೈತರೆ ಆಹಾರ ಧಾನ್ಯ ಕೊಡುವ ವ್ಯವಸ್ಥೆ ಮಾಡಬಹುದು. ಆಗ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ರೈತರು ಸಲಹೆ ನೀಡಿದರು. ಸರ್ಕಾರ ರೈತರ ಹಿತವನ್ನು ಕಾಪಾಡಬೇಕು ಎಂದು ರೈತರು ಮನವಿ ಮಾಡಿದರು.
ಕೃಷಿ ಸಚಿವ ಚೆಲುವರಾಯಸ್ವಾಮಿ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ರೈತ ಮುಖಂಡರು ಸಭೆಯಲ್ಲಿ ಹಾಜರಿದ್ದರು.
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…