ನವದೆಹಲಿ: ದೆಹಲಿ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದ್ವಾರಕಾದಲ್ಲಿನ ಕಚೇರಿಯಲ್ಲಿ ಸುರೇಂದ್ರ ಮಟಿಯಾಲ ಮತ್ತು ಅವರ ಸೋದರಳಿಯ ಶುಕ್ರವಾರ ಸಂಜೆ 7:30ರ ಸುಮಾರಿಗೆ ಟಿವಿ ನೋಡುತ್ತಿದ್ದರು. ಇದೇ ಸಂದರ್ಭದಲ್ಲಿ ಮುಖವಾಡ ಧರಿಸಿದ್ದ ಇಬ್ಬರು ವ್ಯಕ್ತಿಗಳು ಕಚೇರಿಯೊಳಗೆ ನುಗ್ಗಿದ್ದು, ಮಟಿಯಾಲ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಮೇಲೆ ನಾಲ್ಕೈದು ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಕೃತ್ಯದಲ್ಲಿ ಮೂವರು ಆರೋಪಿಗಳು ಭಾಗವಹಿಸಿದ್ದಾರೆ. ಇಬ್ಬರು ಆರೋಪಿಗಳು ಮಟಿಯಾಲರನ್ನು ಹತ್ಯೆ ಮಾಡುವುದಕ್ಕಾಗಿ ಕಚೇರಿಗೆ ಪ್ರವೇಶಿಸಿದರೆ, ಮತ್ತೊಬ್ಬ ಆರೋಪಿ ಕಚೇರಿ ಹೊರಗಡೆ ಬೈಕ್ನಲ್ಲಿ ಕಾಯುತ್ತಿದ್ದ. ಘಟನೆ ಬಳಿಕ ಮೂವರೂ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಟಿಯಾಲ ಅವರ ಕುಟುಂಬಸ್ಥರು ಯಾವುದೇ ಶಂಕಿತರನ್ನು ಹೆಸರಿಸದಿದ್ದರೂ, ಮಟಿಯಾಲ ಅವರು ಕೆಲವರೊಂದಿಗೆ ಆಸ್ತಿ ವಿವಾದ ಹೊಂದಿದ್ದರು. ಹಾಗಾಗಿ ಹತ್ಯೆಯ ಹಿಂದೆ ವೈಯಕ್ತಿಕ ದ್ವೇಷ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಆರೋಪಿಗಳ ಪತ್ತೆಗೆ ಐದು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ದ್ವಾರಕಾ ಉಪ ಪೊಲೀಸ್ ಆಯುಕ್ತ ಹರ್ಷ ವರ್ಧನ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…