ನವದೆಹಲಿ: ದೆಹಲಿ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದ್ವಾರಕಾದಲ್ಲಿನ ಕಚೇರಿಯಲ್ಲಿ ಸುರೇಂದ್ರ ಮಟಿಯಾಲ ಮತ್ತು ಅವರ ಸೋದರಳಿಯ ಶುಕ್ರವಾರ ಸಂಜೆ 7:30ರ ಸುಮಾರಿಗೆ ಟಿವಿ ನೋಡುತ್ತಿದ್ದರು. ಇದೇ ಸಂದರ್ಭದಲ್ಲಿ ಮುಖವಾಡ ಧರಿಸಿದ್ದ ಇಬ್ಬರು ವ್ಯಕ್ತಿಗಳು ಕಚೇರಿಯೊಳಗೆ ನುಗ್ಗಿದ್ದು, ಮಟಿಯಾಲ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಮೇಲೆ ನಾಲ್ಕೈದು ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಕೃತ್ಯದಲ್ಲಿ ಮೂವರು ಆರೋಪಿಗಳು ಭಾಗವಹಿಸಿದ್ದಾರೆ. ಇಬ್ಬರು ಆರೋಪಿಗಳು ಮಟಿಯಾಲರನ್ನು ಹತ್ಯೆ ಮಾಡುವುದಕ್ಕಾಗಿ ಕಚೇರಿಗೆ ಪ್ರವೇಶಿಸಿದರೆ, ಮತ್ತೊಬ್ಬ ಆರೋಪಿ ಕಚೇರಿ ಹೊರಗಡೆ ಬೈಕ್ನಲ್ಲಿ ಕಾಯುತ್ತಿದ್ದ. ಘಟನೆ ಬಳಿಕ ಮೂವರೂ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಟಿಯಾಲ ಅವರ ಕುಟುಂಬಸ್ಥರು ಯಾವುದೇ ಶಂಕಿತರನ್ನು ಹೆಸರಿಸದಿದ್ದರೂ, ಮಟಿಯಾಲ ಅವರು ಕೆಲವರೊಂದಿಗೆ ಆಸ್ತಿ ವಿವಾದ ಹೊಂದಿದ್ದರು. ಹಾಗಾಗಿ ಹತ್ಯೆಯ ಹಿಂದೆ ವೈಯಕ್ತಿಕ ದ್ವೇಷ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಆರೋಪಿಗಳ ಪತ್ತೆಗೆ ಐದು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ದ್ವಾರಕಾ ಉಪ ಪೊಲೀಸ್ ಆಯುಕ್ತ ಹರ್ಷ ವರ್ಧನ್ ಹೇಳಿದ್ದಾರೆ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…