ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಗುರುವಾರ ಬಂಧಿಸಿದೆ.
ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್ಗೂ ಕೂಡ ಪ್ರತಿಕ್ರಿಯಿಸಿಲ್ಲ. ಒಂಭತ್ತು ಬಾರಿ ಇ.ಡಿ ಸಮನ್ಸ್ ನೀಡಿದೆ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು.
ಇದರ ಬೆನ್ನಲ್ಲೇ 12 ಜನ ಇಡಿ ಅಧಿಕಾರಿಗಳ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಕೇಜ್ರಿವಾಲ್ ಸುಪ್ರೀಂ ಮೊರೆ ಹೋಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…