ನವದೆಹಲಿ : ಯಾವುದೇ ಬ್ಯಾಂಕ್ ಗ್ರಾಹಕನಿಗೆ ಸಾಲ ಮರುಪಾವತಿ ಮಾಡುವಂತೆ ಮೊಕದ್ದಮೆ ದಾಖಲಿಸುವ ಮುನ್ನ ಅವರು ಬದುಕಿದ್ದಾರೋ ಅಥವಾ ಮೃತಪಟ್ಟಿದ್ದಾರೋ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ದೆಹಲಿಯ ನ್ಯಾಯಾಲಯವೊಂದು ಹೇಳಿದೆ.
ಸಾವನ್ನಪ್ಪಿದ್ದ ವ್ಯಕ್ತಿಯ ವಿರುದ್ಧ ಎಸ್ ಬಿ ಐ ಬ್ಯಾಂಕ್ ಸಾಲ ವಸೂಲಾತಿಗಾಗಿ ಸಲ್ಲಿಸಿದ್ದ ಅಜ್ಜಿಯನ್ನು ನ್ಯಾಯಾಲಯ ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.
ಸಿಯಾ ನಂದ್ ಎಂಬ ವ್ಯಕ್ತಿಯಿಂದ ಸಾಲ ಮತ್ತು ಬಡ್ಡಿ ಸೇರಿ 13.51 ಲಕ್ಷ ಹಣ ಬರಬೇಕು ಎಂದು ಎಸ್ ಬಿ ಐ ಬ್ಯಾಂಕ್ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು, ಸಿಯಾನಂದ್ ಅವರಿಂದ ಮಾಹಿತಿ ಪಡೆದು ಬರುವಂತೆ ಸೂಚಿಸಿದ್ದರು. ಈ ವೇಳೆ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಎರಡು ವರ್ಷ ಮೊದಲೇ ಸಿಯಾ ನಂದ್ ಮೃತಪಟ್ಟಿದ್ದಾರೆ ಎಂಬ ವಿಷಯ ತಿಳಿದು ಬಂದಿತ್ತು.
ನಂತರ ಬ್ಯಾಂಕ್ ನ ಶಾಖ ವ್ಯವಸ್ಥಾಪಕರಿಗೆ ನ್ಯಾಯಾಲಯ ತಪ್ಪು ಪ್ರಮಾಣ ಪತ್ರ ನೀಡಿದ್ದಕ್ಕಾಗಿ ನೋಟಿಸ್ ನೀಡಿತ್ತು. ಬ್ಯಾಂಕಿನ ಕಾನೂನು, ಸಾಲ ವಸೂಲಾತಿ ಕೋರ್ಟ್ ಪ್ರಕರಣಗಳ ವಿಭಾಗದ ಪ್ರಧಾನ ವ್ಯವಸ್ಥಾಪಕರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ ಮೃತಪಟ್ಟ ವ್ಯಕ್ತಿಯ ವಿರುದ್ಧ ಸಲ್ಲಿಸಿ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಕ್ಕೆ ಕಾರಣ ಹೇಳುವಂತೆ ಕೇಳಿತ್ತು.
ಇದೀಗ ನ್ಯಾಯಾಲಯದ ಮುಂದೆ ಎಸ್ ಬಿ ಐ ತಪ್ಪೊಪ್ಪಿಕೊಂಡಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…